ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ ಪೈಪುಗಳ ಮುಖಾಂತರ ಮನೆಗಳಿಗೆ ನೀರು ನುಗ್ಗಿದೆ.
ರಾತ್ರಿ ಸುಮಾರು 12 ರಿಂದ ಒಂದು ಮೂವತ್ತರ ತನಕ ಸತತವಾಗಿ ಮಳೆ ಸುರಿದ ಪರಿಣಾಮ ಅವಾಂತರ ಸೃಷ್ಟಿಯಾಗಿದ್ದು ಮನೆಯಲ್ಲಿ ಮಲಗಿದ್ದ ಮಕ್ಕಳು ಮಹಿಳೆಯರು ರಾತ್ರಿಪೂರ ನಿದ್ದೆಗೆಟ್ಟು ಜೀವಭಯದಲ್ಲಿ ಬೆಳಗಿನವರೆಗೆ ಕಾಲ ಕಳೆಯುವಂತಾಯ್ತು.
ರಾತ್ರಿ ಏಕಾಏಕಿ ಪೈಪುಗಳ ಮುಖಾಂತರ ನೀರು ನುಗ್ಗಿದ್ದರಿಂದ ಮನೆಯಲ್ಲಿರುವ ವಸ್ತುಗಳನ್ನು ಎತ್ತಲು ಸಾಧ್ಯವಾಗಿಲ್ಲ. ಅಡಿಗೆ ಸಾಮಗ್ರಿಗಳು. ಪಾತ್ರೆಗಳು ಬಟ್ಟೆಗಳು ಎಲ್ಲಾ ನೀರಿನಲ್ಲಿ ತೆಲುವ ದೃಶ್ಯ ಸಾಮಾನ್ಯವಾಗಿತ್ತು. ಬೆಳ್ಳಂಬೆಳಗ್ಗೆ ಎದ್ದು ಮನೆಯ ಮಾಲೀಕರು ಗಳು ಹಾಗೂ ಅಕ್ಕಪಕ್ಕದವರು ಸೇರಿ ಮನೆಗಳನ್ನು ಶುಚಿ ಮಾಡುವ ಕಾರ್ಯ ನಡೆಯಿತು.
ಅಂಗನವಾಡಿ ಕಾರ್ಯಕರ್ತೆಯರ ಆದ ಶಾರದಮ್ಮ ಹಾಗೂ ಗಾಯತ್ರಿ ಅಮ್ಮನವರ ಮನೆಗಳಿಗೆ ಅತಿ ಹೆಚ್ಚು ನೀರು ನುಗ್ಗಿ ಹಾನಿಯನ್ನು ಉಂಟು ಮಾಡಿದೆ ಸಂಬಂಧ ಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…