ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ ಪೈಪುಗಳ ಮುಖಾಂತರ ಮನೆಗಳಿಗೆ ನೀರು ನುಗ್ಗಿದೆ.
ರಾತ್ರಿ ಸುಮಾರು 12 ರಿಂದ ಒಂದು ಮೂವತ್ತರ ತನಕ ಸತತವಾಗಿ ಮಳೆ ಸುರಿದ ಪರಿಣಾಮ ಅವಾಂತರ ಸೃಷ್ಟಿಯಾಗಿದ್ದು ಮನೆಯಲ್ಲಿ ಮಲಗಿದ್ದ ಮಕ್ಕಳು ಮಹಿಳೆಯರು ರಾತ್ರಿಪೂರ ನಿದ್ದೆಗೆಟ್ಟು ಜೀವಭಯದಲ್ಲಿ ಬೆಳಗಿನವರೆಗೆ ಕಾಲ ಕಳೆಯುವಂತಾಯ್ತು.
ರಾತ್ರಿ ಏಕಾಏಕಿ ಪೈಪುಗಳ ಮುಖಾಂತರ ನೀರು ನುಗ್ಗಿದ್ದರಿಂದ ಮನೆಯಲ್ಲಿರುವ ವಸ್ತುಗಳನ್ನು ಎತ್ತಲು ಸಾಧ್ಯವಾಗಿಲ್ಲ. ಅಡಿಗೆ ಸಾಮಗ್ರಿಗಳು. ಪಾತ್ರೆಗಳು ಬಟ್ಟೆಗಳು ಎಲ್ಲಾ ನೀರಿನಲ್ಲಿ ತೆಲುವ ದೃಶ್ಯ ಸಾಮಾನ್ಯವಾಗಿತ್ತು. ಬೆಳ್ಳಂಬೆಳಗ್ಗೆ ಎದ್ದು ಮನೆಯ ಮಾಲೀಕರು ಗಳು ಹಾಗೂ ಅಕ್ಕಪಕ್ಕದವರು ಸೇರಿ ಮನೆಗಳನ್ನು ಶುಚಿ ಮಾಡುವ ಕಾರ್ಯ ನಡೆಯಿತು.
ಅಂಗನವಾಡಿ ಕಾರ್ಯಕರ್ತೆಯರ ಆದ ಶಾರದಮ್ಮ ಹಾಗೂ ಗಾಯತ್ರಿ ಅಮ್ಮನವರ ಮನೆಗಳಿಗೆ ಅತಿ ಹೆಚ್ಚು ನೀರು ನುಗ್ಗಿ ಹಾನಿಯನ್ನು ಉಂಟು ಮಾಡಿದೆ ಸಂಬಂಧ ಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…