ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಯಿತು.
ಪಟ್ಟಣದ ೧೦ ವರ್ಷದ ಬಾಲಕಿಯನ್ನು ಟ್ಯೂಷನ್ ಸಂಸ್ಥೆ ಮಾಲೀಕ, ಮಳವಳ್ಳಿ ತಾಲೂಕು ನೆಲಮಾಕನಹಳ್ಳಿ ನಿವಾಸಿ ಕಾಂತರಾಜು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಬಳಿಕ ಬಾಲಕಿಯ ಶವವನ್ನು ಟ್ಯೂಷನ್ ನಡೆಯುತ್ತಿದ್ದ ಕಟ್ಟಡದ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್ನೊಳಗೆ ಹಾಕಿದ್ದರು.
ಮನೆಗೆ ಬಾರದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದಾಗ, ಕಾಂತರಾಜು ಕೂಡ ಅವರೊಂದಿಗೆ ಸೇರಿ ಬಾಲಕಿಯನ್ನು ಹುಡುಕುವ ನಾಟಕವಾಡಿದ್ದನು. ಶವ ಪತ್ತೆಯಾದ ಬಳಿಕ ಕಾಂತರಾಜು ಮೇಲೆ ಅನುಮಾನ ವ್ಯಕ್ತಪಡಿಸಿ, ಆತನೇ ಕೊಲೆ ಮಾಡಿದ್ದಾನೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜತೆಗೆ, ಪೋಷಕರು ನೀಡಿದ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ ೩೦೨ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಗುರುವಾರ ಬಂದ ವೈದ್ಯಕೀಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ ೩೦೨ ಜತೆಗೆ, ೨೦೧, ೩೭೬(ಎ), ೩೭೬(ಎಬಿ), ಕಲಂ ೫(ಐ) ೫(ಎಂ) ೪ ಮತ್ತು ೬ ಹಾಗೂ ಪೋಕ್ಸೋ ಕಾಯಿದೆ-೨೦೧೨ನ್ನು ಸೇರಿಸಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ೩೭೬(ಎ), ೩೭೬(ಎಬಿ) ಹಾಗೂ ಪೋಕ್ಸೋ ಕಾಯಿದೆಯನ್ನು ಸೇರಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಎನ್.ಯತೀಶ್, ಎಸ್ಪಿ, ಮಂಡ್ಯ
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…