ಜಿಲ್ಲೆಗಳು

ಮಂಡ್ಯ: ದೃಢಪಟ್ಟ ಅತ್ಯಾಚಾರ, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು

ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಯಿತು.

ಪಟ್ಟಣದ ೧೦ ವರ್ಷದ ಬಾಲಕಿಯನ್ನು ಟ್ಯೂಷನ್ ಸಂಸ್ಥೆ ಮಾಲೀಕ, ಮಳವಳ್ಳಿ ತಾಲೂಕು ನೆಲಮಾಕನಹಳ್ಳಿ ನಿವಾಸಿ ಕಾಂತರಾಜು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಬಳಿಕ ಬಾಲಕಿಯ ಶವವನ್ನು ಟ್ಯೂಷನ್ ನಡೆಯುತ್ತಿದ್ದ ಕಟ್ಟಡದ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ನೊಳಗೆ ಹಾಕಿದ್ದರು.
ಮನೆಗೆ ಬಾರದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದಾಗ, ಕಾಂತರಾಜು ಕೂಡ ಅವರೊಂದಿಗೆ ಸೇರಿ ಬಾಲಕಿಯನ್ನು ಹುಡುಕುವ ನಾಟಕವಾಡಿದ್ದನು. ಶವ ಪತ್ತೆಯಾದ ಬಳಿಕ ಕಾಂತರಾಜು ಮೇಲೆ ಅನುಮಾನ ವ್ಯಕ್ತಪಡಿಸಿ, ಆತನೇ ಕೊಲೆ ಮಾಡಿದ್ದಾನೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜತೆಗೆ, ಪೋಷಕರು ನೀಡಿದ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ ೩೦೨ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಗುರುವಾರ ಬಂದ ವೈದ್ಯಕೀಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ ೩೦೨ ಜತೆಗೆ, ೨೦೧, ೩೭೬(ಎ), ೩೭೬(ಎಬಿ), ಕಲಂ ೫(ಐ) ೫(ಎಂ) ೪ ಮತ್ತು ೬ ಹಾಗೂ ಪೋಕ್ಸೋ ಕಾಯಿದೆ-೨೦೧೨ನ್ನು ಸೇರಿಸಲಾಗಿದೆ.


ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ೩೭೬(ಎ), ೩೭೬(ಎಬಿ) ಹಾಗೂ ಪೋಕ್ಸೋ ಕಾಯಿದೆಯನ್ನು ಸೇರಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಎನ್.ಯತೀಶ್, ಎಸ್ಪಿ, ಮಂಡ್ಯ

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

1 hour ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

1 hour ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

1 hour ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago