ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು.
ಪಟ್ಟಣದ ಸವಾನ ಮನಸ್ಕರ ಬಳಗ ಸೌಹಾರ್ದ ನಾಗರಿಕರ ವೇದಿಕೆ, ಮುಸ್ಲಿಂ ಸಮುದಾಯದ ಮುಖಂಡರು, ವರ್ತಕರ ಸಂಘ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ವಿದ್ಯಾ ವಿಕಾಸ್ ಶಾಲೆಯ ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನರು ಸಾಮೂಹಿಕವಾಗಿ ಬಾಲಕಿುಂ ಭಾವಚಿತ್ರವನ್ನಿಟ್ಟುಕೊಂಡು ಮೇಣದ ಬತ್ತಿ ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೌನ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಸೌಹಾರ್ದ ನಾಗರಿಕರ ವೇದಿಕೆಯ ಅಧ್ಯಕ್ಷ ಎಂ.ಎನ್.ಮಹೇಶ್ಕುವಾರ್ ವಾತನಾಡಿ, ಇದೊಂದು ಘನಘೋರ ಘಟನೆ, ತಾಲ್ಲೂಕಿನಲ್ಲಿ ಇಂದು ಕರಾಳ ದಿನವಾಗಿದೆ. ಇಂತಹ ಘಟನೆಗಳು ಮರುಕಳಿಸಬಾರದು. ಮೃತ ಬಾಲಕಿುಂ ಸಾವಿಗೆ ನ್ಯಾಯ ನೀಡಬೇಕು. ಈ ಘಟನೆ ಇಡೀ ನಾಗರಿಕ ಸವಾಜ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.
ಇಂತಹ ಘಟನೆಗಳು ನಡೆುಂದಂತೆ ಮುಂದಿನ ದಿನದಲ್ಲಿ ಸೌಹಾರ್ದ ನಾಗರಿಕರ ವೇದಿಕೆ ವತಿಯಿಂದ ತಾಲ್ಲೂಕಿನಾದ್ಯಂತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಮುಕ್ತ, ದುಶ್ಚಟ ಮುಕ್ತ, ಪ್ರಜ್ಞಾವಂತ ಸವಾಜ ನಿರ್ವಾಣಕ್ಕೆ ಜನಜಾಗೃತಿ ನಡೆುಂಲಿದೆ.
ಇಂತಹ ಅವಾುಂಕ ಕೃತ್ಯಗಳ ಆರೋಪಿಗಳ ವಿರುದ್ಧ ನಮ್ಮ ಹೋರಾಟ ನಿರಂತರ ಎಂದರು.
ಈ ಸಂದರ್ಭದಲ್ಲಿ ಸವಾನ ಮನಸ್ಕರ ನೂರಾರು ಜನರು ಹಾಜರಿದ್ದರು.
ವಕೀಲರ ಸಂಘದ ಖಂಡನೆ
ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರ ಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣಯ ಕೈಗೊಂಡಿದೆ.
ಶಾಸಕರ ಭೇಟಿ: ಸಾಂತ್ವನ
ಬಾಲಕಿಯ ಮನೆಗೆ ಶಾಸಕ ಡಾ.ಕೆ.ಅನ್ನದಾನಿ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಬಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಾಂತ್ವನ ಹೆಳಿದರು.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…