ಜಿಲ್ಲೆಗಳು

ಬಾಲಕಿ ಮೇಲೆ ಅತ್ಯಾಚಾರ; ತಾಲ್ಲೂಕಿನಾದ್ಯಂತ ವ್ಯಾಪಕ ಆಕ್ರೋಶ

ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು.

ಪಟ್ಟಣದ ಸವಾನ ಮನಸ್ಕರ ಬಳಗ ಸೌಹಾರ್ದ ನಾಗರಿಕರ ವೇದಿಕೆ, ಮುಸ್ಲಿಂ ಸಮುದಾಯದ ಮುಖಂಡರು, ವರ್ತಕರ ಸಂಘ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ವಿದ್ಯಾ ವಿಕಾಸ್ ಶಾಲೆಯ ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನರು ಸಾಮೂಹಿಕವಾಗಿ ಬಾಲಕಿುಂ ಭಾವಚಿತ್ರವನ್ನಿಟ್ಟುಕೊಂಡು ಮೇಣದ ಬತ್ತಿ ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೌನ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಸೌಹಾರ್ದ ನಾಗರಿಕರ ವೇದಿಕೆಯ ಅಧ್ಯಕ್ಷ ಎಂ.ಎನ್.ಮಹೇಶ್‌ಕುವಾರ್ ವಾತನಾಡಿ, ಇದೊಂದು ಘನಘೋರ ಘಟನೆ, ತಾಲ್ಲೂಕಿನಲ್ಲಿ ಇಂದು ಕರಾಳ ದಿನವಾಗಿದೆ. ಇಂತಹ ಘಟನೆಗಳು ಮರುಕಳಿಸಬಾರದು. ಮೃತ ಬಾಲಕಿುಂ ಸಾವಿಗೆ ನ್ಯಾಯ ನೀಡಬೇಕು. ಈ ಘಟನೆ ಇಡೀ ನಾಗರಿಕ ಸವಾಜ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.
ಇಂತಹ ಘಟನೆಗಳು ನಡೆುಂದಂತೆ ಮುಂದಿನ ದಿನದಲ್ಲಿ ಸೌಹಾರ್ದ ನಾಗರಿಕರ ವೇದಿಕೆ ವತಿಯಿಂದ ತಾಲ್ಲೂಕಿನಾದ್ಯಂತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಮುಕ್ತ, ದುಶ್ಚಟ ಮುಕ್ತ, ಪ್ರಜ್ಞಾವಂತ ಸವಾಜ ನಿರ್ವಾಣಕ್ಕೆ ಜನಜಾಗೃತಿ ನಡೆುಂಲಿದೆ.
ಇಂತಹ ಅವಾುಂಕ ಕೃತ್ಯಗಳ ಆರೋಪಿಗಳ ವಿರುದ್ಧ ನಮ್ಮ ಹೋರಾಟ ನಿರಂತರ ಎಂದರು.
ಈ ಸಂದರ್ಭದಲ್ಲಿ ಸವಾನ ಮನಸ್ಕರ ನೂರಾರು ಜನರು ಹಾಜರಿದ್ದರು.

ವಕೀಲರ ಸಂಘದ ಖಂಡನೆ

ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರ ಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣಯ ಕೈಗೊಂಡಿದೆ.

ಶಾಸಕರ ಭೇಟಿ: ಸಾಂತ್ವನ

ಬಾಲಕಿಯ ಮನೆಗೆ ಶಾಸಕ ಡಾ.ಕೆ.ಅನ್ನದಾನಿ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಬಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಾಂತ್ವನ ಹೆಳಿದರು.

 

andolanait

Recent Posts

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

21 mins ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

1 hour ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…

1 hour ago

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

2 hours ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

3 hours ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

3 hours ago