ಜಿಲ್ಲೆಗಳು

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯ: ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ತೆರಳಿದ್ದ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ವೃದ್ಧ ಸ್ವಾಮಿಗೌಡ ( 74) ಅವರು ಅಪಘಾತದಿಂದ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹರಿಹರ ಬೈಪಾಸ್‌ ಬಳಿ ನಡೆದ ಅಪಘಾತದಲ್ಲಿ ವೃದ್ಧ ಸ್ವಾಮಿಗೌಡ ನಿಧನರಾಗಿದ್ದು ಇವರು ಆ.3ರಂದು ಕಾರ್ಯಕ್ರಮವನ್ನು ಮುಗಿಸಿ ಪಾಂಡವಪುರಕ್ಕೆ ವಾಪಸ್‌ ಬರುವ ವೇಳೆ ತಪ್ಪಿಸಿಕೊಂಡು ಹೆದ್ದಾರಿಯ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಹಿಟ್‌ ಅಂಡ್‌ ರನ್‌ ಪ್ರಕರಣ ದಾಖಲಾಗಿದೆ.

ಸ್ವಾಮಿಗೌಡ ಅವರು ನಾಪತ್ತೆಯಾಗಿರುವ ಸಂಬಂಧ ಇವರ ಕುಟುಂಬಸ್ಥರು ಶ್ರೀರಂಗಪಟ್ಟಣ ದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಹರಿಹರ ಪೊಲೀಸ್‌ ಠಾಣೆಗೆ ಈ ಸಂಬಂಧವಾಗಿ ಸ್ವಾಮಿಗೌಡ ಅವರ ಭಾವಚಿತ್ರವನ್ನು ಕಳುಹಿಸಿದ್ದಾರೆ. ಗುರುತಿಸಿದ ನಂತರ ಪ್ರಕರಣ  ತಡವಾಗಿ ಬೆಳಕಿಗೆ ಬಂದಿದೆ.

ಇಂದು ಮರಣೋತ್ತರ ಪರೀಕ್ಷೆಯನ್ನು ನಡೆಸಿ ಸ್ವಾಮಿಗೌಡ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

 

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

3 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

4 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

5 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

6 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

6 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

6 hours ago