ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಯಗುಚಗುಪ್ಪೆ ಗ್ರಾಮದ ಅಭಿಷೇಕ್ ಎಂಬಾತ ತನ್ನ ಬೈಕ್ನಲ್ಲಿ ಏಳೆಂಟು ತಿಂಗಳ ಹಸುಗೂಸು ಹಾಗೂ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಬೈಕ್ ಸವಾರನಾಗಿದ್ದ ಅಭಿಷೇಕ್ ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಎ.ಎಸ್.ಐ. ರಘುಪ್ರಕಾಶ್ ಎಂಬುವವರು ಬೈಕ್ ಅಡ್ಡಗಟ್ಟಿ ಕೀ ಕಸಿದು ೫೦೦ ರೂ. ದಂಡ ಪಾವತಿಸಿ ಬೈಕ್ ತೆಗೆದುಕೊಂಡು ತೆರಳುವಂತೆ ತಾಕೀತು ಮಾಡಿದರು.
ಸಂಚಾರ ಪೊಲೀಸ್ ಅಧಿಕಾರಿಯ ಆದೇಶದಿಂದ ಭೀತಿಗೊಂಡ ಅಭಿಷೇಕ್ ಪತ್ನಿ ಹಾಗೂ ಮಗುವನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾದಾಚಾರಿ ಮಾರ್ಗದಲ್ಲಿ ಕುಳ್ಳಿರಿಸಿ ವಿ.ವಿ. ರಸ್ತೆಯ ಎಟಿಎಂಗೆ ತೆರಳಿ ಹಣ ಡ್ರಾ ಮಾಡಿಕೊಂಡು ಬಂದು ದಂಡ ಪಾವತಿಸಿ ಪೊಲೀಸರಿಂದ ಬೈಕ್ ಪಡೆದು ಪತ್ನಿ ಹಾಗೂ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬೈಕ್ ನಿಲ್ಲಿಸಿದ ವೇಳೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಘುಪ್ರಕಾಶ್ ಎಂಬುವರು ಸಾರ್ವಜನಿಕರು ಹಾಗೂ ದಂಪತಿ ಮಾಡಿಕೊಂಡ ಮನವಿಗೆ ಕ್ಯಾರೆ ಎನ್ನದೇ ದಂಡ ಪಾವತಿಸಿ ಬೈಕ್ ಪಡೆಯಬೇಕೆಂದು ಅದೇಶಿಸಿದ ಪೊಲೀಸ್ ಅಧಿಕಾರಿ ಮಾನವೀಯತೆಯಿಂದ ವರ್ತಿಸಿ ನ್ಯಾಯಾಲಯದಲ್ಲಿ ದಂಡ ಪಾವತಿಸುವಂತೆ ತಿಳಿ ಹೇಳಿ ಬೈಕ್ ಸವಾರನನ್ನು ಕಳುಹಿಸಿದ್ದರೆ, ಇಲಾಖೆಯ ಗೌರವ ಹೆಚ್ಚಾಗುತ್ತಿರಲಿಲ್ಲವೇ, ಸಣ್ಣಪುಟ್ಟ ತಪ್ಪುಗಳಿಗೂ ನಿರ್ಧಯವಾಗಿ ನಡೆದುಕೊಳ್ಳುವ ಪೊಲೀಸ್ ಇಲಾಖೆಯ ಕೆಲ ಅಧಿಕಾರಿ, ಸಿಬ್ಬಂದಿಯ ನಡತೆ ಇಲಾಖೆ ಮೇಲಿನ ಹಿನ್ನಡೆಗೆ ಕಾರಣವಾಗಿದೆ.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…