ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಯಗುಚಗುಪ್ಪೆ ಗ್ರಾಮದ ಅಭಿಷೇಕ್ ಎಂಬಾತ ತನ್ನ ಬೈಕ್ನಲ್ಲಿ ಏಳೆಂಟು ತಿಂಗಳ ಹಸುಗೂಸು ಹಾಗೂ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಬೈಕ್ ಸವಾರನಾಗಿದ್ದ ಅಭಿಷೇಕ್ ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಎ.ಎಸ್.ಐ. ರಘುಪ್ರಕಾಶ್ ಎಂಬುವವರು ಬೈಕ್ ಅಡ್ಡಗಟ್ಟಿ ಕೀ ಕಸಿದು ೫೦೦ ರೂ. ದಂಡ ಪಾವತಿಸಿ ಬೈಕ್ ತೆಗೆದುಕೊಂಡು ತೆರಳುವಂತೆ ತಾಕೀತು ಮಾಡಿದರು.
ಸಂಚಾರ ಪೊಲೀಸ್ ಅಧಿಕಾರಿಯ ಆದೇಶದಿಂದ ಭೀತಿಗೊಂಡ ಅಭಿಷೇಕ್ ಪತ್ನಿ ಹಾಗೂ ಮಗುವನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾದಾಚಾರಿ ಮಾರ್ಗದಲ್ಲಿ ಕುಳ್ಳಿರಿಸಿ ವಿ.ವಿ. ರಸ್ತೆಯ ಎಟಿಎಂಗೆ ತೆರಳಿ ಹಣ ಡ್ರಾ ಮಾಡಿಕೊಂಡು ಬಂದು ದಂಡ ಪಾವತಿಸಿ ಪೊಲೀಸರಿಂದ ಬೈಕ್ ಪಡೆದು ಪತ್ನಿ ಹಾಗೂ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬೈಕ್ ನಿಲ್ಲಿಸಿದ ವೇಳೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಘುಪ್ರಕಾಶ್ ಎಂಬುವರು ಸಾರ್ವಜನಿಕರು ಹಾಗೂ ದಂಪತಿ ಮಾಡಿಕೊಂಡ ಮನವಿಗೆ ಕ್ಯಾರೆ ಎನ್ನದೇ ದಂಡ ಪಾವತಿಸಿ ಬೈಕ್ ಪಡೆಯಬೇಕೆಂದು ಅದೇಶಿಸಿದ ಪೊಲೀಸ್ ಅಧಿಕಾರಿ ಮಾನವೀಯತೆಯಿಂದ ವರ್ತಿಸಿ ನ್ಯಾಯಾಲಯದಲ್ಲಿ ದಂಡ ಪಾವತಿಸುವಂತೆ ತಿಳಿ ಹೇಳಿ ಬೈಕ್ ಸವಾರನನ್ನು ಕಳುಹಿಸಿದ್ದರೆ, ಇಲಾಖೆಯ ಗೌರವ ಹೆಚ್ಚಾಗುತ್ತಿರಲಿಲ್ಲವೇ, ಸಣ್ಣಪುಟ್ಟ ತಪ್ಪುಗಳಿಗೂ ನಿರ್ಧಯವಾಗಿ ನಡೆದುಕೊಳ್ಳುವ ಪೊಲೀಸ್ ಇಲಾಖೆಯ ಕೆಲ ಅಧಿಕಾರಿ, ಸಿಬ್ಬಂದಿಯ ನಡತೆ ಇಲಾಖೆ ಮೇಲಿನ ಹಿನ್ನಡೆಗೆ ಕಾರಣವಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…