ಜಿಲ್ಲೆಗಳು

ಮಂಡ್ಯ : ದಂಡ ಪಾವತಿಗಾಗಿ ಪಾದಾಚಾರಿ ಮಾರ್ಗದಲ್ಲಿ ದಂಪತಿಯನ್ನು ಕೂರಿಸಿ ಶಿಕ್ಷೆ!

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಯಗುಚಗುಪ್ಪೆ ಗ್ರಾಮದ ಅಭಿಷೇಕ್ ಎಂಬಾತ ತನ್ನ ಬೈಕ್‌ನಲ್ಲಿ ಏಳೆಂಟು ತಿಂಗಳ ಹಸುಗೂಸು ಹಾಗೂ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಬೈಕ್ ಸವಾರನಾಗಿದ್ದ ಅಭಿಷೇಕ್ ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಎ.ಎಸ್.ಐ. ರಘುಪ್ರಕಾಶ್ ಎಂಬುವವರು ಬೈಕ್ ಅಡ್ಡಗಟ್ಟಿ ಕೀ ಕಸಿದು ೫೦೦ ರೂ. ದಂಡ ಪಾವತಿಸಿ ಬೈಕ್ ತೆಗೆದುಕೊಂಡು ತೆರಳುವಂತೆ ತಾಕೀತು ಮಾಡಿದರು.
ಸಂಚಾರ ಪೊಲೀಸ್ ಅಧಿಕಾರಿಯ ಆದೇಶದಿಂದ ಭೀತಿಗೊಂಡ ಅಭಿಷೇಕ್ ಪತ್ನಿ ಹಾಗೂ ಮಗುವನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾದಾಚಾರಿ ಮಾರ್ಗದಲ್ಲಿ ಕುಳ್ಳಿರಿಸಿ ವಿ.ವಿ. ರಸ್ತೆಯ ಎಟಿಎಂಗೆ ತೆರಳಿ ಹಣ ಡ್ರಾ ಮಾಡಿಕೊಂಡು ಬಂದು ದಂಡ ಪಾವತಿಸಿ ಪೊಲೀಸರಿಂದ ಬೈಕ್ ಪಡೆದು ಪತ್ನಿ ಹಾಗೂ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬೈಕ್ ನಿಲ್ಲಿಸಿದ ವೇಳೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ರಘುಪ್ರಕಾಶ್ ಎಂಬುವರು ಸಾರ್ವಜನಿಕರು ಹಾಗೂ ದಂಪತಿ ಮಾಡಿಕೊಂಡ ಮನವಿಗೆ ಕ್ಯಾರೆ ಎನ್ನದೇ ದಂಡ ಪಾವತಿಸಿ ಬೈಕ್ ಪಡೆಯಬೇಕೆಂದು ಅದೇಶಿಸಿದ ಪೊಲೀಸ್ ಅಧಿಕಾರಿ ಮಾನವೀಯತೆಯಿಂದ ವರ್ತಿಸಿ ನ್ಯಾಯಾಲಯದಲ್ಲಿ ದಂಡ ಪಾವತಿಸುವಂತೆ ತಿಳಿ ಹೇಳಿ ಬೈಕ್ ಸವಾರನನ್ನು ಕಳುಹಿಸಿದ್ದರೆ, ಇಲಾಖೆಯ ಗೌರವ ಹೆಚ್ಚಾಗುತ್ತಿರಲಿಲ್ಲವೇ, ಸಣ್ಣಪುಟ್ಟ ತಪ್ಪುಗಳಿಗೂ ನಿರ್ಧಯವಾಗಿ ನಡೆದುಕೊಳ್ಳುವ ಪೊಲೀಸ್ ಇಲಾಖೆಯ ಕೆಲ ಅಧಿಕಾರಿ, ಸಿಬ್ಬಂದಿಯ ನಡತೆ ಇಲಾಖೆ ಮೇಲಿನ ಹಿನ್ನಡೆಗೆ ಕಾರಣವಾಗಿದೆ.

andolanait

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

1 hour ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

2 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

2 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

3 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

3 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

3 hours ago