ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಯಗುಚಗುಪ್ಪೆ ಗ್ರಾಮದ ಅಭಿಷೇಕ್ ಎಂಬಾತ ತನ್ನ ಬೈಕ್ನಲ್ಲಿ ಏಳೆಂಟು ತಿಂಗಳ ಹಸುಗೂಸು ಹಾಗೂ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಬೈಕ್ ಸವಾರನಾಗಿದ್ದ ಅಭಿಷೇಕ್ ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಎ.ಎಸ್.ಐ. ರಘುಪ್ರಕಾಶ್ ಎಂಬುವವರು ಬೈಕ್ ಅಡ್ಡಗಟ್ಟಿ ಕೀ ಕಸಿದು ೫೦೦ ರೂ. ದಂಡ ಪಾವತಿಸಿ ಬೈಕ್ ತೆಗೆದುಕೊಂಡು ತೆರಳುವಂತೆ ತಾಕೀತು ಮಾಡಿದರು.
ಸಂಚಾರ ಪೊಲೀಸ್ ಅಧಿಕಾರಿಯ ಆದೇಶದಿಂದ ಭೀತಿಗೊಂಡ ಅಭಿಷೇಕ್ ಪತ್ನಿ ಹಾಗೂ ಮಗುವನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾದಾಚಾರಿ ಮಾರ್ಗದಲ್ಲಿ ಕುಳ್ಳಿರಿಸಿ ವಿ.ವಿ. ರಸ್ತೆಯ ಎಟಿಎಂಗೆ ತೆರಳಿ ಹಣ ಡ್ರಾ ಮಾಡಿಕೊಂಡು ಬಂದು ದಂಡ ಪಾವತಿಸಿ ಪೊಲೀಸರಿಂದ ಬೈಕ್ ಪಡೆದು ಪತ್ನಿ ಹಾಗೂ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬೈಕ್ ನಿಲ್ಲಿಸಿದ ವೇಳೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಘುಪ್ರಕಾಶ್ ಎಂಬುವರು ಸಾರ್ವಜನಿಕರು ಹಾಗೂ ದಂಪತಿ ಮಾಡಿಕೊಂಡ ಮನವಿಗೆ ಕ್ಯಾರೆ ಎನ್ನದೇ ದಂಡ ಪಾವತಿಸಿ ಬೈಕ್ ಪಡೆಯಬೇಕೆಂದು ಅದೇಶಿಸಿದ ಪೊಲೀಸ್ ಅಧಿಕಾರಿ ಮಾನವೀಯತೆಯಿಂದ ವರ್ತಿಸಿ ನ್ಯಾಯಾಲಯದಲ್ಲಿ ದಂಡ ಪಾವತಿಸುವಂತೆ ತಿಳಿ ಹೇಳಿ ಬೈಕ್ ಸವಾರನನ್ನು ಕಳುಹಿಸಿದ್ದರೆ, ಇಲಾಖೆಯ ಗೌರವ ಹೆಚ್ಚಾಗುತ್ತಿರಲಿಲ್ಲವೇ, ಸಣ್ಣಪುಟ್ಟ ತಪ್ಪುಗಳಿಗೂ ನಿರ್ಧಯವಾಗಿ ನಡೆದುಕೊಳ್ಳುವ ಪೊಲೀಸ್ ಇಲಾಖೆಯ ಕೆಲ ಅಧಿಕಾರಿ, ಸಿಬ್ಬಂದಿಯ ನಡತೆ ಇಲಾಖೆ ಮೇಲಿನ ಹಿನ್ನಡೆಗೆ ಕಾರಣವಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…