ಜಿಲ್ಲೆಗಳು

ಮಂಡ್ಯ : ದಂಡ ಪಾವತಿಗಾಗಿ ಪಾದಾಚಾರಿ ಮಾರ್ಗದಲ್ಲಿ ದಂಪತಿಯನ್ನು ಕೂರಿಸಿ ಶಿಕ್ಷೆ!

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಯಗುಚಗುಪ್ಪೆ ಗ್ರಾಮದ ಅಭಿಷೇಕ್ ಎಂಬಾತ ತನ್ನ ಬೈಕ್‌ನಲ್ಲಿ ಏಳೆಂಟು ತಿಂಗಳ ಹಸುಗೂಸು ಹಾಗೂ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಬೈಕ್ ಸವಾರನಾಗಿದ್ದ ಅಭಿಷೇಕ್ ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಎ.ಎಸ್.ಐ. ರಘುಪ್ರಕಾಶ್ ಎಂಬುವವರು ಬೈಕ್ ಅಡ್ಡಗಟ್ಟಿ ಕೀ ಕಸಿದು ೫೦೦ ರೂ. ದಂಡ ಪಾವತಿಸಿ ಬೈಕ್ ತೆಗೆದುಕೊಂಡು ತೆರಳುವಂತೆ ತಾಕೀತು ಮಾಡಿದರು.
ಸಂಚಾರ ಪೊಲೀಸ್ ಅಧಿಕಾರಿಯ ಆದೇಶದಿಂದ ಭೀತಿಗೊಂಡ ಅಭಿಷೇಕ್ ಪತ್ನಿ ಹಾಗೂ ಮಗುವನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾದಾಚಾರಿ ಮಾರ್ಗದಲ್ಲಿ ಕುಳ್ಳಿರಿಸಿ ವಿ.ವಿ. ರಸ್ತೆಯ ಎಟಿಎಂಗೆ ತೆರಳಿ ಹಣ ಡ್ರಾ ಮಾಡಿಕೊಂಡು ಬಂದು ದಂಡ ಪಾವತಿಸಿ ಪೊಲೀಸರಿಂದ ಬೈಕ್ ಪಡೆದು ಪತ್ನಿ ಹಾಗೂ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬೈಕ್ ನಿಲ್ಲಿಸಿದ ವೇಳೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ರಘುಪ್ರಕಾಶ್ ಎಂಬುವರು ಸಾರ್ವಜನಿಕರು ಹಾಗೂ ದಂಪತಿ ಮಾಡಿಕೊಂಡ ಮನವಿಗೆ ಕ್ಯಾರೆ ಎನ್ನದೇ ದಂಡ ಪಾವತಿಸಿ ಬೈಕ್ ಪಡೆಯಬೇಕೆಂದು ಅದೇಶಿಸಿದ ಪೊಲೀಸ್ ಅಧಿಕಾರಿ ಮಾನವೀಯತೆಯಿಂದ ವರ್ತಿಸಿ ನ್ಯಾಯಾಲಯದಲ್ಲಿ ದಂಡ ಪಾವತಿಸುವಂತೆ ತಿಳಿ ಹೇಳಿ ಬೈಕ್ ಸವಾರನನ್ನು ಕಳುಹಿಸಿದ್ದರೆ, ಇಲಾಖೆಯ ಗೌರವ ಹೆಚ್ಚಾಗುತ್ತಿರಲಿಲ್ಲವೇ, ಸಣ್ಣಪುಟ್ಟ ತಪ್ಪುಗಳಿಗೂ ನಿರ್ಧಯವಾಗಿ ನಡೆದುಕೊಳ್ಳುವ ಪೊಲೀಸ್ ಇಲಾಖೆಯ ಕೆಲ ಅಧಿಕಾರಿ, ಸಿಬ್ಬಂದಿಯ ನಡತೆ ಇಲಾಖೆ ಮೇಲಿನ ಹಿನ್ನಡೆಗೆ ಕಾರಣವಾಗಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago