ಮದ್ದೂರು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಕರುವನ್ನು ಹೊತ್ತೊಯ್ದ ಚಿರತೆ ತಿಂದು ಹಾಕಿರುವ ಘಟನೆ ತಾಲ್ಲೂಕಿನ ಮಾದಾಪುರದೊಡ್ಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಗ್ರಾಮದ ಅಭಿ ಎಂಬುವರಿಗೆ ಸೇರಿದ ಹಸುವಿನ ಕರುವನ್ನು ಶುಕ್ರವಾರ ತಡರಾತ್ರಿ ಚಿರತೆ ಹೊತ್ತೊಯ್ದು ತಿಂದು ಹಾಕಿದೆ.
ಪ್ರತಿನಿತ್ಯ ಕೊಟ್ಟಿಗೆಯಲ್ಲಿ ಹಸು ಮತ್ತು ಕರುವನ್ನು ಕಟ್ಟಿ ಹಾಕಲಾಗುತ್ತಿತ್ತು. ಚಿರತೆ ರಾತ್ರಿ ವೇಳೆ ದಾಳಿ ಮಾಡಿ ಕರುವನ್ನು ಅನತಿ ದೂರ ಎಳೆದೊಯ್ದು ಅರ್ಧ ಭಾಗ ತಿಂದು ಹಾಕಿದೆ.
ಚಿರತೆ ದಾಳಿ ಮಾಡಿರುವ ಬೆನ್ನೆಲ್ಲೇ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಜಮೀನಿಗೆ ತೆರಳಲು ರೈತರು ಆತಂಕ ಪಡುತ್ತಿದ್ದಾರೆ. ಚಿರತೆ ಪ್ರತ್ಯಕ್ಷದಿಂದ ಗ್ರಾಮದಲ್ಲಿ ಭೀತಿ ಸೃಷ್ಟಿಸಿದೆ.
ಕರು ಕಳೆದುಕೊಂಡ ರೈತನ ಕುಟುಂಬ ಕಂಗಾಲಾಗಿದ್ದು, ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದು, ಇದೇ ವೇಳೆ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…