ಮದ್ದೂರು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಕರುವನ್ನು ಹೊತ್ತೊಯ್ದ ಚಿರತೆ ತಿಂದು ಹಾಕಿರುವ ಘಟನೆ ತಾಲ್ಲೂಕಿನ ಮಾದಾಪುರದೊಡ್ಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಗ್ರಾಮದ ಅಭಿ ಎಂಬುವರಿಗೆ ಸೇರಿದ ಹಸುವಿನ ಕರುವನ್ನು ಶುಕ್ರವಾರ ತಡರಾತ್ರಿ ಚಿರತೆ ಹೊತ್ತೊಯ್ದು ತಿಂದು ಹಾಕಿದೆ.
ಪ್ರತಿನಿತ್ಯ ಕೊಟ್ಟಿಗೆಯಲ್ಲಿ ಹಸು ಮತ್ತು ಕರುವನ್ನು ಕಟ್ಟಿ ಹಾಕಲಾಗುತ್ತಿತ್ತು. ಚಿರತೆ ರಾತ್ರಿ ವೇಳೆ ದಾಳಿ ಮಾಡಿ ಕರುವನ್ನು ಅನತಿ ದೂರ ಎಳೆದೊಯ್ದು ಅರ್ಧ ಭಾಗ ತಿಂದು ಹಾಕಿದೆ.
ಚಿರತೆ ದಾಳಿ ಮಾಡಿರುವ ಬೆನ್ನೆಲ್ಲೇ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಜಮೀನಿಗೆ ತೆರಳಲು ರೈತರು ಆತಂಕ ಪಡುತ್ತಿದ್ದಾರೆ. ಚಿರತೆ ಪ್ರತ್ಯಕ್ಷದಿಂದ ಗ್ರಾಮದಲ್ಲಿ ಭೀತಿ ಸೃಷ್ಟಿಸಿದೆ.
ಕರು ಕಳೆದುಕೊಂಡ ರೈತನ ಕುಟುಂಬ ಕಂಗಾಲಾಗಿದ್ದು, ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದು, ಇದೇ ವೇಳೆ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…