ಮಂಡ್ಯ: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಲಿದ್ದು, ನಾನೇ ಚುನಾವಣೆಯ ನೇತೃತ್ವ ವಹಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ತಿಳಿಸಿದ್ದಾರೆ.
ಗುರುವಾರ ಪಾಂಡವಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿ, ಇಂದು ಚೆನ್ನೈನಲ್ಲಿ ಕುಮಾರಸ್ವಾಮಿಯವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಬರಲಿದ್ದಾರೆ. ಬಂದ ಬಳಿಕ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಅಷ್ಟೇ ಬರಲಿ ಎಂದು ಹೇಳಿದ್ದೇವೆ. ನಾವೇ ಓಡಾಡಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಾಳೆ ಬಿಜೆಪಿ ಹೈಕಮಾಂಡ್ ಜೆಡಿಎಸ್ಗೆ ಯಾವ ಕ್ಷೇತ್ರಗಳು ಎಂದು ಅಧಿಕೃತವಾಗಿ ಮಾಹಿತಿ ನೀಡಲಿದೆ. ಟಿಕೆಟ್ ಘೋಷಣೆ ಬಳಿಕ ಸುಮಲತಾ ಅವರೊಂದಿಗೂ ಮಾತಾನಾಡುತ್ತೇವೆ. ಅವರು ಹೇಗೆ ನಡೆದುಕೊಳ್ಳಬೇಕು, ನಾವು ಹೇಗೆ ನಡೆದುಕೊಳ್ಳಬೇಕು ಎಂದು ರಾಷ್ಟ್ರ ನಾಯಕರು ಹೇಳುತ್ತಾರೆ. ಆ ಮೂಲಕ ಕ್ಷೇತ್ರದ ಗೆಲುವಿಗೆ ಎಲ್ಲರೂ ಒಗ್ಗಟ್ಟನಿಂದ ದುಡಿಯುತ್ತೇವೆ ಎಂದು ಪುಟ್ಟರಾಜು ಹೇಳಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…