ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಂದು ( ಏಪ್ರಿಲ್ 4 ) ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಹಲವು ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಹಾಗೂ ಜಾ.ದಳ ಮೈತ್ರಿಕೂಟಕ್ಕೆ ಕಗ್ಗಂಟಾಗಿದ್ದ ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದು, ಇದ್ದ ಎಲ್ಲಾ ಅಡೆತಡೆಗಳು ಶಮನವಾಗಿವೆ.
ಹೆಚ್ಡಿ ಕುಮಾರಸ್ವಾಮಿ ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಸಿಎಸ್ ಪುಟ್ಟರಾಜು ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಮುನ್ನ ಮಾಧ್ಯಮದವರ ಜತೆ ಮಾತನಾಡಿದ ಕುಮಾರಸ್ವಾಮಿ ಇಲ್ಲಿ ಸ್ಪರ್ಧಿಸುವುದು ಅನಿವಾರ್ಯವಾಗಿತ್ತು. ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಅರ್ಕೇಶ್ವರ ಸ್ವಾಮಿ ದೇವಸ್ಥಾನ, ಕಾಳಕಾಂಬ ದೇವಸ್ಥಾನ, ಶ್ರೀ ಜನಾರ್ಧನ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ವಿಶ್ವೇಶ್ವರಯ್ಯ, ಬಾಬು ಜಗಜೀವನರಾವ್ ಹಾಗೂ ಅಂಬೇಡ್ಕರ್ ಪುತ್ತಳಿಗೆ ಹಾರ ಹಾಕಿ ನಮಿಸಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…