ಮಂಡ್ಯ : ಜಿಲ್ಲಾ ಕೇಂದ್ರ ಮಂಡ್ಯ ನಗರಸಭೆ ವ್ಯಾಪ್ತಿಯ ರಸ್ತೆಗಳ ಉನ್ನತೀಕರಣ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ೮೦ ಕೋಟಿ ರೂ. ಮಂಜೂರಾಗಿದ್ದು, ಈ ಪೈಕಿ ೫೨ ಕೋಟಿ ರೂ.ಗಳನ್ನು ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಡಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ಗೌಡ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರಸ್ತೆ ಅಭಿವೃದ್ಧಿ, ಕ್ರೀಡಾಂಗಣ ನಿರ್ಮಾಣ, ಮಳೆ ರಕ್ಷಣಾ ಗೋಡೆ, ಕೆಂಪೇಗೌಡ ಪ್ರತಿಮೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುಮತಿ ದೊರೆತಿದೆ ಎಂದು ಹೇಳಿದರು.
ನಗರದ ಬನ್ನೂರು ರಸ್ತೆ ಅಭಿವೃದ್ಧಿಗೆ ೬.೪೦ ಕೋಟಿ ರೂ. ಡಲ್ಛ್ ವತಿಯಿಂದ ಯೋಜನೆ ಮಂಜೂರಾಗಿದ್ದು, ಫುಟ್ಪಾತ್ ನಿರ್ಮಾಣ ಹಾಗೂ ಸೈಕಲ್ ಪಾಥ್, ವಿದ್ಯುತ್ ದೀಪಗಳ ಅಳವಡಿಕೆಗೆ ಕ್ರಮವಹಿಸಲಾಗುವುದೆಂದು ತಿಳಿಸಿದರು.
ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ೨ ಕೋಟಿ ರೂ. ವೆಚ್ಚದಲ್ಲಿ ಆಡಿಟೋರಿಯಂ ನಿರ್ಮಾಣ, ಕ್ರೀಡಾ ಇಲಾಖೆಯಿಂದ ೨ ಕೋಟಿ ರೂ. ವೆಚ್ಚದಲ್ಲಿ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೂರನೇ ವಾರ್ಡಿನ ಬೀಡಿ ಕಾರ್ಮಿಕರ ಕಾಲೋನಿ ಅಭಿವೃದ್ಧಿಗೆ ೧೦ ಕೋಟಿ ರೂ. ಕಾಮಗಾರಿ, ೧.೬೦ ಕೋಟಿ ರೂ. ವೆಚ್ಚದಲ್ಲಿ ಹೊಸಹಳ್ಳಿ- ಕಾರಸವಾಡಿ ರಸ್ತೆ ಅಭಿವೃದ್ಧಿ ಕಾಮಗಾರಿ, ನೀರಾವರಿ ಇಲಾಖೆಯಿಂದ ೧೫ ಕೋಟಿ ರೂ ವೆಚ್ಚದಲ್ಲಿ ಮಳೆ ರಕ್ಷಣಾ ಗೋಡೆ ನಿರ್ಮಣ ಮಾಡಲಾಗುವುದೆಂದು ತಿಳಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…