ಮಂಡ್ಯ

ಮಂಡ್ಯ ನಗರ ಅಭಿವೃದ್ಧಿಗೆ 52 ಕೋಟಿ ರೂ. ಬಿಡುಗಡೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ : ಜಿಲ್ಲಾ ಕೇಂದ್ರ ಮಂಡ್ಯ ನಗರಸಭೆ ವ್ಯಾಪ್ತಿಯ ರಸ್ತೆಗಳ ಉನ್ನತೀಕರಣ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ೮೦ ಕೋಟಿ ರೂ. ಮಂಜೂರಾಗಿದ್ದು, ಈ ಪೈಕಿ ೫೨ ಕೋಟಿ ರೂ.ಗಳನ್ನು ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಡಲಾಗಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರಸ್ತೆ ಅಭಿವೃದ್ಧಿ, ಕ್ರೀಡಾಂಗಣ ನಿರ್ಮಾಣ, ಮಳೆ ರಕ್ಷಣಾ ಗೋಡೆ, ಕೆಂಪೇಗೌಡ ಪ್ರತಿಮೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುಮತಿ ದೊರೆತಿದೆ ಎಂದು ಹೇಳಿದರು.

ನಗರದ ಬನ್ನೂರು ರಸ್ತೆ ಅಭಿವೃದ್ಧಿಗೆ ೬.೪೦ ಕೋಟಿ ರೂ. ಡಲ್ಛ್ ವತಿಯಿಂದ ಯೋಜನೆ ಮಂಜೂರಾಗಿದ್ದು, ಫುಟ್‌ಪಾತ್ ನಿರ್ಮಾಣ ಹಾಗೂ ಸೈಕಲ್ ಪಾಥ್, ವಿದ್ಯುತ್ ದೀಪಗಳ ಅಳವಡಿಕೆಗೆ ಕ್ರಮವಹಿಸಲಾಗುವುದೆಂದು ತಿಳಿಸಿದರು.

ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ೨ ಕೋಟಿ ರೂ. ವೆಚ್ಚದಲ್ಲಿ ಆಡಿಟೋರಿಯಂ ನಿರ್ಮಾಣ, ಕ್ರೀಡಾ ಇಲಾಖೆಯಿಂದ ೨ ಕೋಟಿ ರೂ. ವೆಚ್ಚದಲ್ಲಿ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೂರನೇ ವಾರ್ಡಿನ ಬೀಡಿ ಕಾರ್ಮಿಕರ ಕಾಲೋನಿ ಅಭಿವೃದ್ಧಿಗೆ ೧೦ ಕೋಟಿ ರೂ. ಕಾಮಗಾರಿ, ೧.೬೦ ಕೋಟಿ ರೂ. ವೆಚ್ಚದಲ್ಲಿ ಹೊಸಹಳ್ಳಿ- ಕಾರಸವಾಡಿ ರಸ್ತೆ ಅಭಿವೃದ್ಧಿ ಕಾಮಗಾರಿ, ನೀರಾವರಿ ಇಲಾಖೆಯಿಂದ ೧೫ ಕೋಟಿ ರೂ ವೆಚ್ಚದಲ್ಲಿ ಮಳೆ ರಕ್ಷಣಾ ಗೋಡೆ ನಿರ್ಮಣ ಮಾಡಲಾಗುವುದೆಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

13 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

13 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

14 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

14 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

14 hours ago