ಮಂಡ್ಯ

ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದ್ದು, ಪ್ರವಾಸಿಗರ ಪ್ರವೇಶಕ್ಕೂ ಸಹ ನಿರ್ಬಂಧ ವಿಧಿಸಲಾಗಿದೆ.

ನದಿ ಪ್ರವಾಹದಿಂದ ಶ್ರೀರಂಗಪಟ್ಟಣದ ಕಾವೇರಿ ನದಿ ತಟದ ಪಶ್ಚಿಮವಾಹಿನಿ, ಸ್ನಾನಘಟ್ಟ, ಸಂಗಮ ಸೇರಿ ಹಲವು ಪ್ರದೇಶ ಜಲಾವೃತವಾಗಿದ್ದು, ಕಾವೇರಿ ನದಿ ತಟದಲ್ಲಿರುವ ನಿಮಿಷಾಂಭ ದೇಗುಲದ ಬಳಿ ನದಿ ಬಳಿಗೆ ತೆರಳಲು ಜನರಿಗೆ ನಿರ್ಬಂಧ ವಿಧಿಸಲಾಗಿದೆ.

ನಿಮಿಷಾಂಭ ದೇಗುಲದ ಬಳಿ ಭಕ್ತರ ಸ್ನಾನಘಟ್ಟ ಹಾಗೂ ಸ್ನಾನಗೃಹ ಜಲಾವೃತವಾಗಿದ್ದು, ಪಶ್ಚಿಮ ವಾಹಿನಿ ಹಾಗೂ ಸ್ನಾನಘಟ್ಟ ಶ್ರದ್ಧಾ ಕೇಂದ್ರ ಬಹುತೇಕ ಮುಳುಗಡೆಯಾಗಿದೆ.

ಚೆಕ್‌ಪೋಸ್ಟ್ ಬಳಿಯ ಸಾಯಿಮಂದಿರಕ್ಕೂ ಕಾವೇರಿ ನದಿ ಪ್ರವಾಹದ ನೀರು ನುಗ್ಗಿದ್ದು, ನದಿ ಪಾತ್ರದ ರೈತರ ಜಮೀನು ಪ್ರವಾಹದಿಂದ ಮುಳುಗಡೆಯಾಗಿವೆ.

ಶ್ರೀರಂಗಪಟ್ಟಣದ ಬಳಿಯ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತದಲ್ಲಿ ತಲುಪಿದ್ದು, ಈ ಸೇತುವೆ ಮೇಲೆ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಸಕಲ ಸಿದ್ಧತೆ ನಡೆಸಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago