krs
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದ್ದು, ಪ್ರವಾಸಿಗರ ಪ್ರವೇಶಕ್ಕೂ ಸಹ ನಿರ್ಬಂಧ ವಿಧಿಸಲಾಗಿದೆ.
ನದಿ ಪ್ರವಾಹದಿಂದ ಶ್ರೀರಂಗಪಟ್ಟಣದ ಕಾವೇರಿ ನದಿ ತಟದ ಪಶ್ಚಿಮವಾಹಿನಿ, ಸ್ನಾನಘಟ್ಟ, ಸಂಗಮ ಸೇರಿ ಹಲವು ಪ್ರದೇಶ ಜಲಾವೃತವಾಗಿದ್ದು, ಕಾವೇರಿ ನದಿ ತಟದಲ್ಲಿರುವ ನಿಮಿಷಾಂಭ ದೇಗುಲದ ಬಳಿ ನದಿ ಬಳಿಗೆ ತೆರಳಲು ಜನರಿಗೆ ನಿರ್ಬಂಧ ವಿಧಿಸಲಾಗಿದೆ.
ನಿಮಿಷಾಂಭ ದೇಗುಲದ ಬಳಿ ಭಕ್ತರ ಸ್ನಾನಘಟ್ಟ ಹಾಗೂ ಸ್ನಾನಗೃಹ ಜಲಾವೃತವಾಗಿದ್ದು, ಪಶ್ಚಿಮ ವಾಹಿನಿ ಹಾಗೂ ಸ್ನಾನಘಟ್ಟ ಶ್ರದ್ಧಾ ಕೇಂದ್ರ ಬಹುತೇಕ ಮುಳುಗಡೆಯಾಗಿದೆ.
ಚೆಕ್ಪೋಸ್ಟ್ ಬಳಿಯ ಸಾಯಿಮಂದಿರಕ್ಕೂ ಕಾವೇರಿ ನದಿ ಪ್ರವಾಹದ ನೀರು ನುಗ್ಗಿದ್ದು, ನದಿ ಪಾತ್ರದ ರೈತರ ಜಮೀನು ಪ್ರವಾಹದಿಂದ ಮುಳುಗಡೆಯಾಗಿವೆ.
ಶ್ರೀರಂಗಪಟ್ಟಣದ ಬಳಿಯ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತದಲ್ಲಿ ತಲುಪಿದ್ದು, ಈ ಸೇತುವೆ ಮೇಲೆ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಸಕಲ ಸಿದ್ಧತೆ ನಡೆಸಿದೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…