ಮಂಡ್ಯ

ಮಂಡ್ಯ | ಮೈಶುಗರ್ ಕಾರ್ಖಾನೆಗೆ ಮತ್ತೆ 10 ಕೋಟಿ ರೂ. ನೆರವು

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯು ಯಶಸ್ವಿಯಾಗಿ ಕಬ್ಬು ನುರಿಸಲು ಮೂರನೇ ಬಾರಿಗೆ 10 ಕೋಟಿ ರೂ.ಗಳ ನೆರವನ್ನು ನೀಡಿ ಸಹಕರಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸತತವಾಗಿ ನೆರವು ನೀಡುತ್ತಿದ್ದು, ಕಳೆದ ಹಂಗಾಮಿನಲ್ಲಿ ಸರ್ಕಾರದ ಅನುದಾನ ಪಡೆಯದೇ ರೈತರಿಗೆ ಪೂರ್ಣ ಹಣವನ್ನು ಪಾವತಿ ಮಾಡಿ ಮೈಷುಗರ್ ಇತಿಹಾಸದಲ್ಲಿ ಮಾದರಿಯಾಗಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತತ್ಸಂಬಂಧ 2023ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಮೈಷುಗರ್‌ಗೆ 50 ಕೋಟಿ ಅನುದಾನ ನೀಡಿಲಾಗಿತ್ತು, ಇತ್ತೀಚೆಗೆ 53 ಕೋಟಿ ವಿದ್ಯುತ್ ಬಿಲ್ ಮನ್ನ ಮಾಡಿದ ಸರ್ಕಾರ ಇದೀಗ 10 ಕೋಟಿ ರೂ. ನೆರವನ್ನು ನೀಡಿದೆ. ಈ ಬಾರಿಯೂ ಕಬ್ಬು ನಾಟಿ ಮಾಡಿದ ಹಿರಿತನದ ಆಧಾರದಲ್ಲಿ ನೊಂದಣಿಯಾಗಿರುವ ಕಬ್ಬನ್ನು ಯಶಸ್ವಿಯಾಗಿ ನುರಿಯಲಿದ್ದೇವೆ ಎಂದು ಹೇಳಿದರು.

ಒಪ್ಪಿಗೆಯಾಗಿರುವ ಕಬ್ಬನ್ನು ಯಶಸ್ವಿ ಯಾಗಿ ಅರೆಯುವ ಮೂಲಕ ಈ ಬಾರಿ ಪಡೆಯುವ ನೆರವಿನಲ್ಲಿ ಕನಿಷ್ಠ 4 ಕೋಟಿ ರೂಗಳನ್ನು ಹಿಂದಿರುಗಿಸುವ ಮೂಲಕ ಇತಿಹಾಸ ಬರೆಯುವ ಯೋಜನೆ ರೂಪಿಸಿಕೊಂಡಿರುವುದಾಗಿ ಪ್ರಶ್ನೆಗೆ ಉತ್ತರ ನೀಡಿದ ಅವರು, ನಗರ ವ್ಯಾಪ್ತಿಯಲ್ಲಿ ಮೈಷುಗರ್ ಕಂಪನಿಗೆ ಸೇರಬೇಕಾದ ಆರೂವರೆಯಿಂದ ಏಳು ಎಕರೆ ಹಾಗೂ ಕಂದಾಯ ವ್ಯಾಪ್ತಿಯ 20ರಿಂದ 30 ಎಕರೆ ಒತ್ತುವರಿ ಭೂಮಿಯನ್ನು ತೆರವುಗೊಳಿಸಲು ಕ್ರಮ ವಹಿಸಲಾಗುವುದು. ವಾಣಿಜ್ಯವಾಗಿ ಇಂದಿನ ದರದಂತೆ ಬಾಡಿಗೆ ನೀಡುವುದಾದರೆ ಅವರಿಗೇ ಬಾಡಿಗೆಗೆ ನೀಡಲಾಗುವುದು ಎಂದು ತಿಳಿಸಿದರು.

ಜು.28ರಂದು ಮದ್ದೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಪುಟದ ಅನೇಕ ಸಚಿವರು ಆಗಮಿಸಲಿದ್ದು, ಸದರಿ ಕಾರ್ಯ ಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಟಿಯಲ್ಲಿ ಕೆ.ಸುರೇಶ್, ಶ್ರೀಧರ್, ವೀಣಾ ಶಂಕರ್, ಉದಯ್, ದೇವಯ್ಯ, ಸಿ.ಎಂ.ದ್ಯಾವಪ್ಪ, ನಾಗರಾಜು ಇದ್ದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago