ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯು ಯಶಸ್ವಿಯಾಗಿ ಕಬ್ಬು ನುರಿಸಲು ಮೂರನೇ ಬಾರಿಗೆ 10 ಕೋಟಿ ರೂ.ಗಳ ನೆರವನ್ನು ನೀಡಿ ಸಹಕರಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸತತವಾಗಿ ನೆರವು ನೀಡುತ್ತಿದ್ದು, ಕಳೆದ ಹಂಗಾಮಿನಲ್ಲಿ ಸರ್ಕಾರದ ಅನುದಾನ ಪಡೆಯದೇ ರೈತರಿಗೆ ಪೂರ್ಣ ಹಣವನ್ನು ಪಾವತಿ ಮಾಡಿ ಮೈಷುಗರ್ ಇತಿಹಾಸದಲ್ಲಿ ಮಾದರಿಯಾಗಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತತ್ಸಂಬಂಧ 2023ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಮೈಷುಗರ್ಗೆ 50 ಕೋಟಿ ಅನುದಾನ ನೀಡಿಲಾಗಿತ್ತು, ಇತ್ತೀಚೆಗೆ 53 ಕೋಟಿ ವಿದ್ಯುತ್ ಬಿಲ್ ಮನ್ನ ಮಾಡಿದ ಸರ್ಕಾರ ಇದೀಗ 10 ಕೋಟಿ ರೂ. ನೆರವನ್ನು ನೀಡಿದೆ. ಈ ಬಾರಿಯೂ ಕಬ್ಬು ನಾಟಿ ಮಾಡಿದ ಹಿರಿತನದ ಆಧಾರದಲ್ಲಿ ನೊಂದಣಿಯಾಗಿರುವ ಕಬ್ಬನ್ನು ಯಶಸ್ವಿಯಾಗಿ ನುರಿಯಲಿದ್ದೇವೆ ಎಂದು ಹೇಳಿದರು.
ಒಪ್ಪಿಗೆಯಾಗಿರುವ ಕಬ್ಬನ್ನು ಯಶಸ್ವಿ ಯಾಗಿ ಅರೆಯುವ ಮೂಲಕ ಈ ಬಾರಿ ಪಡೆಯುವ ನೆರವಿನಲ್ಲಿ ಕನಿಷ್ಠ 4 ಕೋಟಿ ರೂಗಳನ್ನು ಹಿಂದಿರುಗಿಸುವ ಮೂಲಕ ಇತಿಹಾಸ ಬರೆಯುವ ಯೋಜನೆ ರೂಪಿಸಿಕೊಂಡಿರುವುದಾಗಿ ಪ್ರಶ್ನೆಗೆ ಉತ್ತರ ನೀಡಿದ ಅವರು, ನಗರ ವ್ಯಾಪ್ತಿಯಲ್ಲಿ ಮೈಷುಗರ್ ಕಂಪನಿಗೆ ಸೇರಬೇಕಾದ ಆರೂವರೆಯಿಂದ ಏಳು ಎಕರೆ ಹಾಗೂ ಕಂದಾಯ ವ್ಯಾಪ್ತಿಯ 20ರಿಂದ 30 ಎಕರೆ ಒತ್ತುವರಿ ಭೂಮಿಯನ್ನು ತೆರವುಗೊಳಿಸಲು ಕ್ರಮ ವಹಿಸಲಾಗುವುದು. ವಾಣಿಜ್ಯವಾಗಿ ಇಂದಿನ ದರದಂತೆ ಬಾಡಿಗೆ ನೀಡುವುದಾದರೆ ಅವರಿಗೇ ಬಾಡಿಗೆಗೆ ನೀಡಲಾಗುವುದು ಎಂದು ತಿಳಿಸಿದರು.
ಜು.28ರಂದು ಮದ್ದೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಪುಟದ ಅನೇಕ ಸಚಿವರು ಆಗಮಿಸಲಿದ್ದು, ಸದರಿ ಕಾರ್ಯ ಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಟಿಯಲ್ಲಿ ಕೆ.ಸುರೇಶ್, ಶ್ರೀಧರ್, ವೀಣಾ ಶಂಕರ್, ಉದಯ್, ದೇವಯ್ಯ, ಸಿ.ಎಂ.ದ್ಯಾವಪ್ಪ, ನಾಗರಾಜು ಇದ್ದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…