ಮಂಡ್ಯ

ಮಂಡ್ಯ | ಮೈಶುಗರ್ ಕಾರ್ಖಾನೆಗೆ ಮತ್ತೆ 10 ಕೋಟಿ ರೂ. ನೆರವು

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯು ಯಶಸ್ವಿಯಾಗಿ ಕಬ್ಬು ನುರಿಸಲು ಮೂರನೇ ಬಾರಿಗೆ 10 ಕೋಟಿ ರೂ.ಗಳ ನೆರವನ್ನು ನೀಡಿ ಸಹಕರಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸತತವಾಗಿ ನೆರವು ನೀಡುತ್ತಿದ್ದು, ಕಳೆದ ಹಂಗಾಮಿನಲ್ಲಿ ಸರ್ಕಾರದ ಅನುದಾನ ಪಡೆಯದೇ ರೈತರಿಗೆ ಪೂರ್ಣ ಹಣವನ್ನು ಪಾವತಿ ಮಾಡಿ ಮೈಷುಗರ್ ಇತಿಹಾಸದಲ್ಲಿ ಮಾದರಿಯಾಗಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತತ್ಸಂಬಂಧ 2023ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಮೈಷುಗರ್‌ಗೆ 50 ಕೋಟಿ ಅನುದಾನ ನೀಡಿಲಾಗಿತ್ತು, ಇತ್ತೀಚೆಗೆ 53 ಕೋಟಿ ವಿದ್ಯುತ್ ಬಿಲ್ ಮನ್ನ ಮಾಡಿದ ಸರ್ಕಾರ ಇದೀಗ 10 ಕೋಟಿ ರೂ. ನೆರವನ್ನು ನೀಡಿದೆ. ಈ ಬಾರಿಯೂ ಕಬ್ಬು ನಾಟಿ ಮಾಡಿದ ಹಿರಿತನದ ಆಧಾರದಲ್ಲಿ ನೊಂದಣಿಯಾಗಿರುವ ಕಬ್ಬನ್ನು ಯಶಸ್ವಿಯಾಗಿ ನುರಿಯಲಿದ್ದೇವೆ ಎಂದು ಹೇಳಿದರು.

ಒಪ್ಪಿಗೆಯಾಗಿರುವ ಕಬ್ಬನ್ನು ಯಶಸ್ವಿ ಯಾಗಿ ಅರೆಯುವ ಮೂಲಕ ಈ ಬಾರಿ ಪಡೆಯುವ ನೆರವಿನಲ್ಲಿ ಕನಿಷ್ಠ 4 ಕೋಟಿ ರೂಗಳನ್ನು ಹಿಂದಿರುಗಿಸುವ ಮೂಲಕ ಇತಿಹಾಸ ಬರೆಯುವ ಯೋಜನೆ ರೂಪಿಸಿಕೊಂಡಿರುವುದಾಗಿ ಪ್ರಶ್ನೆಗೆ ಉತ್ತರ ನೀಡಿದ ಅವರು, ನಗರ ವ್ಯಾಪ್ತಿಯಲ್ಲಿ ಮೈಷುಗರ್ ಕಂಪನಿಗೆ ಸೇರಬೇಕಾದ ಆರೂವರೆಯಿಂದ ಏಳು ಎಕರೆ ಹಾಗೂ ಕಂದಾಯ ವ್ಯಾಪ್ತಿಯ 20ರಿಂದ 30 ಎಕರೆ ಒತ್ತುವರಿ ಭೂಮಿಯನ್ನು ತೆರವುಗೊಳಿಸಲು ಕ್ರಮ ವಹಿಸಲಾಗುವುದು. ವಾಣಿಜ್ಯವಾಗಿ ಇಂದಿನ ದರದಂತೆ ಬಾಡಿಗೆ ನೀಡುವುದಾದರೆ ಅವರಿಗೇ ಬಾಡಿಗೆಗೆ ನೀಡಲಾಗುವುದು ಎಂದು ತಿಳಿಸಿದರು.

ಜು.28ರಂದು ಮದ್ದೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಪುಟದ ಅನೇಕ ಸಚಿವರು ಆಗಮಿಸಲಿದ್ದು, ಸದರಿ ಕಾರ್ಯ ಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಟಿಯಲ್ಲಿ ಕೆ.ಸುರೇಶ್, ಶ್ರೀಧರ್, ವೀಣಾ ಶಂಕರ್, ಉದಯ್, ದೇವಯ್ಯ, ಸಿ.ಎಂ.ದ್ಯಾವಪ್ಪ, ನಾಗರಾಜು ಇದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

5 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

7 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

9 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

9 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

10 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

13 hours ago