Categories: ಮಂಡ್ಯ

ಶ್ರೀರಂಗಪಟ್ಟಣ ಪ್ರವಾಸೋದ್ಯಮಕ್ಕೆ 100 ಕೋಟಿ ವೆಚ್ಚದ ಡಿಪಿಆರ್‌: ಡಾ.ಕುಮಾರ

ಮಂಡ್ಯ:  ಶ್ರೀರಂಗಪಟ್ಟಣ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ ವೆಚ್ಚದಲ್ಲಿ ಡಿ.ಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ  ತಿಳಿಸಿದರು.

ಅವರು ಇಂದು(ನ.28) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಶ್ರೀ ರಂಗನಾಥ ಸ್ವಾಮಿ ದೇವಾಲಯವನ್ನು ಕೇಂದ್ರವಾಗಿ ಇರಿಸಿಕೊಂಡು ಇದರ ಸುತ್ತಲಿನ 5.5 ಕಿಮೀ ನಲ್ಲಿ ಬರುವ ಪ್ರವಾಸಿ ತಾಣಗಳಿಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದರು.

ಇದರಲ್ಲಿ ಒಡೆಯರ್ ಅವರ ಜನ್ಮಸ್ಥಳ, ಪುರಾತನ ಗಾಟ್ಗಳ ಸಂರಕ್ಷಣೆ, ವಿವಿಧ ರೀತಿಯ ಸೂಚನಾ ಪಲಕಗಳು, ಪುರಾತನ ಕಾಲದಲ್ಲಿ ಯುದ್ಧದಲ್ಲಿ ಉಪಯೋಗಿಸುತ್ತಿದ್ದ ಶಸ್ತ್ರಸ್ತಗಳು, ಕಲ್ಯಾಣಿ, ಮಂಟಪ, ರಸ್ತೆಗಳು ಸೇರಿದಂತೆ ವಿವಿಧ ರೀತಿಯ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಿದರು.

ಈ ಯೋಜನೆ ಸಂಪೂರ್ಣವಾಗಿ ಸಿದ್ಧವಾದ ನಂತರ ಶ್ರೀರಂಗಪಟ್ಟಣ ಶಾಸಕರೊಂದಿಗೆ ಸಭೆ ನಡೆಸಿ ನಂತರ ಪ್ರಸ್ತಾವನೆಯನ್ನು ಸಲ್ಲಿಸಬೇಕಿದೆ. ಅಧಿಕಾರಿಗಳಿಗೆ ಸಿದ್ಧತೆ ನಡೆಸುವಂತೆ ತಿಳಿಸಿದರು.

ಈ ಯೋಜನೆಯಿಂದ ಪ್ರವಾಸೋದ್ಯಮ ಉತ್ತೇಜನ ನೀಡುವುದರ ಜೊತೆಗೆ ಹಲವಾರು ಉದ್ಯೋಗಗಳನ್ನು ಸೃಷ್ಠಿಸಬಹುದು. ಬಹಳಷ್ಟು ಕೊಳಗಳು ಹಾಗೂ ಸ್ಥಳಗಳಲ್ಲಿ ಬರುವ ಆದಾಯದಿಂದ ಸ್ವಚ್ಛತೆ ಯನ್ನು ಕಾಪಾಡಬಹುದು ಎಂದರು.

ರಾಜ್ಯ ಪುರತತ್ವ ಇಲಾಖೆಯ ಆಯುಕ್ತರಾದ ದೇವರಾಜ್  ಮಾತನಾಡಿ,  ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಕೆಲವು ದುರಸ್ತಿ ಕಾಮಗಾರಿಗಳು ನಡೆಯಬೇಕಿದ್ದು, ಇದಕ್ಕೆ ಅನುದಾನ ಪುರತತ್ವ ಇಲಾಖೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ ದೇವಸ್ಥಾನದಿಂದ ಅನುದಾನ ಪಡೆದು ಕಾಮಗಾರಿ ನಡೆಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಭಾರತ ಸರ್ಕಾರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರ ವಿಶೇಷಾಧಿಕಾರಿ ಬಿ ಎನ್ ಕೃಷ್ಣಯ್ಯ, ಪುರಾತತ್ವ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಶ್ರೀ ರಂಗನಾಥಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ, ಶ್ರೀ ನಿಮಿಷಾಂಭ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ,ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಪುರತತ್ವ ಸಂರಕ್ಷಣಾ ಸಹಾಯಕ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

5 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

5 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

7 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

7 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

7 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

7 hours ago