ಮಂಡ್ಯ: ಶ್ರೀರಂಗಪಟ್ಟಣ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ ವೆಚ್ಚದಲ್ಲಿ ಡಿ.ಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಅವರು ಇಂದು(ನ.28) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಶ್ರೀ ರಂಗನಾಥ ಸ್ವಾಮಿ ದೇವಾಲಯವನ್ನು ಕೇಂದ್ರವಾಗಿ ಇರಿಸಿಕೊಂಡು ಇದರ ಸುತ್ತಲಿನ 5.5 ಕಿಮೀ ನಲ್ಲಿ ಬರುವ ಪ್ರವಾಸಿ ತಾಣಗಳಿಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದರು.
ಇದರಲ್ಲಿ ಒಡೆಯರ್ ಅವರ ಜನ್ಮಸ್ಥಳ, ಪುರಾತನ ಗಾಟ್ಗಳ ಸಂರಕ್ಷಣೆ, ವಿವಿಧ ರೀತಿಯ ಸೂಚನಾ ಪಲಕಗಳು, ಪುರಾತನ ಕಾಲದಲ್ಲಿ ಯುದ್ಧದಲ್ಲಿ ಉಪಯೋಗಿಸುತ್ತಿದ್ದ ಶಸ್ತ್ರಸ್ತಗಳು, ಕಲ್ಯಾಣಿ, ಮಂಟಪ, ರಸ್ತೆಗಳು ಸೇರಿದಂತೆ ವಿವಿಧ ರೀತಿಯ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಿದರು.
ಈ ಯೋಜನೆ ಸಂಪೂರ್ಣವಾಗಿ ಸಿದ್ಧವಾದ ನಂತರ ಶ್ರೀರಂಗಪಟ್ಟಣ ಶಾಸಕರೊಂದಿಗೆ ಸಭೆ ನಡೆಸಿ ನಂತರ ಪ್ರಸ್ತಾವನೆಯನ್ನು ಸಲ್ಲಿಸಬೇಕಿದೆ. ಅಧಿಕಾರಿಗಳಿಗೆ ಸಿದ್ಧತೆ ನಡೆಸುವಂತೆ ತಿಳಿಸಿದರು.
ಈ ಯೋಜನೆಯಿಂದ ಪ್ರವಾಸೋದ್ಯಮ ಉತ್ತೇಜನ ನೀಡುವುದರ ಜೊತೆಗೆ ಹಲವಾರು ಉದ್ಯೋಗಗಳನ್ನು ಸೃಷ್ಠಿಸಬಹುದು. ಬಹಳಷ್ಟು ಕೊಳಗಳು ಹಾಗೂ ಸ್ಥಳಗಳಲ್ಲಿ ಬರುವ ಆದಾಯದಿಂದ ಸ್ವಚ್ಛತೆ ಯನ್ನು ಕಾಪಾಡಬಹುದು ಎಂದರು.
ರಾಜ್ಯ ಪುರತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಮಾತನಾಡಿ, ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಕೆಲವು ದುರಸ್ತಿ ಕಾಮಗಾರಿಗಳು ನಡೆಯಬೇಕಿದ್ದು, ಇದಕ್ಕೆ ಅನುದಾನ ಪುರತತ್ವ ಇಲಾಖೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ ದೇವಸ್ಥಾನದಿಂದ ಅನುದಾನ ಪಡೆದು ಕಾಮಗಾರಿ ನಡೆಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಭಾರತ ಸರ್ಕಾರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರ ವಿಶೇಷಾಧಿಕಾರಿ ಬಿ ಎನ್ ಕೃಷ್ಣಯ್ಯ, ಪುರಾತತ್ವ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಶ್ರೀ ರಂಗನಾಥಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ, ಶ್ರೀ ನಿಮಿಷಾಂಭ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ,ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಪುರತತ್ವ ಸಂರಕ್ಷಣಾ ಸಹಾಯಕ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…