Categories: ಮಂಡ್ಯ

ಶ್ರೀರಂಗಪಟ್ಟಣ ಪ್ರವಾಸೋದ್ಯಮಕ್ಕೆ 100 ಕೋಟಿ ವೆಚ್ಚದ ಡಿಪಿಆರ್‌: ಡಾ.ಕುಮಾರ

ಮಂಡ್ಯ:  ಶ್ರೀರಂಗಪಟ್ಟಣ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ ವೆಚ್ಚದಲ್ಲಿ ಡಿ.ಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ  ತಿಳಿಸಿದರು.

ಅವರು ಇಂದು(ನ.28) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಶ್ರೀ ರಂಗನಾಥ ಸ್ವಾಮಿ ದೇವಾಲಯವನ್ನು ಕೇಂದ್ರವಾಗಿ ಇರಿಸಿಕೊಂಡು ಇದರ ಸುತ್ತಲಿನ 5.5 ಕಿಮೀ ನಲ್ಲಿ ಬರುವ ಪ್ರವಾಸಿ ತಾಣಗಳಿಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದರು.

ಇದರಲ್ಲಿ ಒಡೆಯರ್ ಅವರ ಜನ್ಮಸ್ಥಳ, ಪುರಾತನ ಗಾಟ್ಗಳ ಸಂರಕ್ಷಣೆ, ವಿವಿಧ ರೀತಿಯ ಸೂಚನಾ ಪಲಕಗಳು, ಪುರಾತನ ಕಾಲದಲ್ಲಿ ಯುದ್ಧದಲ್ಲಿ ಉಪಯೋಗಿಸುತ್ತಿದ್ದ ಶಸ್ತ್ರಸ್ತಗಳು, ಕಲ್ಯಾಣಿ, ಮಂಟಪ, ರಸ್ತೆಗಳು ಸೇರಿದಂತೆ ವಿವಿಧ ರೀತಿಯ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಿದರು.

ಈ ಯೋಜನೆ ಸಂಪೂರ್ಣವಾಗಿ ಸಿದ್ಧವಾದ ನಂತರ ಶ್ರೀರಂಗಪಟ್ಟಣ ಶಾಸಕರೊಂದಿಗೆ ಸಭೆ ನಡೆಸಿ ನಂತರ ಪ್ರಸ್ತಾವನೆಯನ್ನು ಸಲ್ಲಿಸಬೇಕಿದೆ. ಅಧಿಕಾರಿಗಳಿಗೆ ಸಿದ್ಧತೆ ನಡೆಸುವಂತೆ ತಿಳಿಸಿದರು.

ಈ ಯೋಜನೆಯಿಂದ ಪ್ರವಾಸೋದ್ಯಮ ಉತ್ತೇಜನ ನೀಡುವುದರ ಜೊತೆಗೆ ಹಲವಾರು ಉದ್ಯೋಗಗಳನ್ನು ಸೃಷ್ಠಿಸಬಹುದು. ಬಹಳಷ್ಟು ಕೊಳಗಳು ಹಾಗೂ ಸ್ಥಳಗಳಲ್ಲಿ ಬರುವ ಆದಾಯದಿಂದ ಸ್ವಚ್ಛತೆ ಯನ್ನು ಕಾಪಾಡಬಹುದು ಎಂದರು.

ರಾಜ್ಯ ಪುರತತ್ವ ಇಲಾಖೆಯ ಆಯುಕ್ತರಾದ ದೇವರಾಜ್  ಮಾತನಾಡಿ,  ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಕೆಲವು ದುರಸ್ತಿ ಕಾಮಗಾರಿಗಳು ನಡೆಯಬೇಕಿದ್ದು, ಇದಕ್ಕೆ ಅನುದಾನ ಪುರತತ್ವ ಇಲಾಖೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ ದೇವಸ್ಥಾನದಿಂದ ಅನುದಾನ ಪಡೆದು ಕಾಮಗಾರಿ ನಡೆಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಭಾರತ ಸರ್ಕಾರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರ ವಿಶೇಷಾಧಿಕಾರಿ ಬಿ ಎನ್ ಕೃಷ್ಣಯ್ಯ, ಪುರಾತತ್ವ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಶ್ರೀ ರಂಗನಾಥಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ, ಶ್ರೀ ನಿಮಿಷಾಂಭ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ,ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಪುರತತ್ವ ಸಂರಕ್ಷಣಾ ಸಹಾಯಕ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago