ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿಯು ಹೊಂಚು ಹಾಕುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 100ಕೋಟಿ ರೂ ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪಿ.ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಗಟ್ಟಿಯಾಗಿದೆ ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ. ಆದರೆ, ಬಿ.ಎಲ್ ಸಂತೋಷ್, ಶೋಭಾ ಕರಂದ್ಲಾಜೆ, ಎಚ್.ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.
ರಾಜ್ಯದಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಐದು ವರ್ಷವೂ ಅಧಿಕಾರದಲ್ಲಿ ಇರುತ್ತದೆ. ನಮ್ಮ ಸಿಎಂ ಸಿದ್ದರಾಮಯ್ಯ ಅವರು ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿವುದಾಗಿ ಮೋದಿಗೆ ಐದು ಜನ ಮಾತು ಕೊಟ್ಟಿದ್ದಾರೆ. ಹೀಗಾಗಿ, ಬಿಜೆಪಿಯ ಬ್ರೋಕರ್ಗಳು ಕಾಂಗ್ರೆಸ್ ಶಾಸಕರಿಗೆ ಆಮಿಷ ಹೊಡ್ಡುತ್ತಿದ್ದಾರೆ. ಆದರೆ, ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಹ ಎಲ್ಲಾ ಮಾಹಿತಿ ಕಲೆ ಹಾಕುತ್ತೇವೆ. ಮಾಹಿತಿ ಸಂಗ್ರಹಿಸಿ ಇಡಿಗೆ ಕೊಡುತ್ತೇವೆ. ರಾಜ್ಯ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯ ಯಾರಿಗೂ ತಾಕತ್ತಿಲ್ಲ ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…