ಮಂಡ್ಯ

ಚಿರತೆ ದಾಳಿಗೆ 12 ಮೇಕೆ ಬಲಿ : ಮೇಕೆಗಳ ಮೃತದೇಹ ಹೆದ್ದಾರಿಯಲ್ಲಿಟ್ಟು ಗ್ರಾಮಸ್ಥರ ಪ್ರತಿಭಟನೆ

ಪಾಂಡವಪುರ : ಮೇಕೆ ಮತ್ತು ಕುರಿಗಳ ಮೇಲೆ ಚಿರತೆ ದಾಳಿ ನಡೆಸಿ, 12 ಮೇಕೆಗಳನ್ನು ಕೊಂದಿದ್ದರೂ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದನ್ನು ಖಂಡಿಸಿ ಟಿ.ಎಸ್.ಛತ್ರ ಗ್ರಾಮಸ್ಥರು ಸಾವನ್ನಪ್ಪಿದ ಮೇಕೆಗಳನ್ನು ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿಯ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು.

ಟಿ.ಎಸ್.ಛತ್ರ ಗ್ರಾಮದ ರೈತ ಮಾಯಿಗೌಡ ಎಂಬವರ ದನದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಆಡುಗಳ ಮೇಲೆ ಮಂಗಳವಾರ ಮಂಜಾನೆ ಚಿರತೆ ದಾಳಿ ನಡೆಸಿ 12 ಮೇಕೆಗಳನ್ನು ಕೊಂದು ಪರಾರಿಯಾಗಿದೆ. ಮೇಕೆಗಳ ಮಾಲೀಕ ಮುಂಜಾನೆ ಜಮೀನಿನ ಬಳಿ ತೆರಳಿ ಮೇಕೆಗಳನ್ನು ಮೇಯಿಸಲು ದನದ ಕೊಟ್ಟಿಗೆ ತೆರೆದಾಗ ಮೇಕೆಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಆದರೆ, ಅರಣ್ಯಾಧಿಕಾರಿಗಳು ಮಧ್ಯಾಹ್ನವಾದರೂ ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮೃತಪಟ್ಟ ಮೇಕೆಗಳನ್ನು ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿಯ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಟಿ.ಎಸ್.ಛತ್ರ ಪಕ್ಕದ ಇಂಗಲಕುಪ್ಪೆ ಗ್ರಾಮದಲ್ಲಿ ಕೊಟ್ಟಿಗೆಗೆ ಚಿರತೆ ನುಗ್ಗಿ ಮೂರು ಮೇಕೆಗಳನ್ನು ಕೊಂದಿತ್ತು. ಆದರೆ, ಅರಣ್ಯಾಧಿಕಾರಿಗಳು ಚಿರತೆಯ ಸೆರೆಗೆ ಯಾವುದೇ ಕ್ರಮ ಜರುಗಿಸಲಿಲ್ಲ. ಘಟನೆ ನಡೆದ ಮೂರೇ ದಿನದಲ್ಲಿ ಈಗ ಪಕ್ಕದ ಗ್ರಾಮದಲ್ಲಿಯೂ ಘಟನೆ ನಡೆದಿದೆ. ಈ ಘಟನೆಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ. ಘಟನೆಯಿಂದಾಗಿ ರೈತ ಮಾಯಿಗೌಡರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಹಾಗಾಗಿ ಸಂಬಂಧಿಸಿದ ಅರಣ್ಯ ಇಲಾಖೆಯ ಮೇಲಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತ ಮಾಯಿಗೌಡ ಅವರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಯಿತು. ವಾಹನ ಸವಾರರು ಪರದಾಡಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಚರ್ಚಿಸಿ, ಪರಿಹಾರ ದೊರಕಿಸಿಕೊಡುವುದರ ಜತೆಗೆ ಚಿರತೆ ಸೆರೆಗೆ ಬೋನ್ ಇಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.

ಟಿ.ಎಸ್.ಛತ್ರ, ಇಂಗಲಕುಪ್ಪೆ , ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

13 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

20 hours ago