ಮಂಡ್ಯ: ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಕೃಷಿ ಹಾಗೂ ಮಂಡ್ಯ ಜಿಲ್ಸಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಮಂಡ್ಯ ಕ್ಷೇತ್ರದ ಶಾಸಕರಾದ ರವಿಕುಮಾರ್ ಗಣಿಗ ಸೇರಿದಂತೆ ಮಂಡ್ಯ ನಗರದ ಕೆಹೆಚ್ಬಿ ಕಾಲೋನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯ ಜಿಲ್ಲೆಯಲ್ಲಿ ಮಳೆಹಾನಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ನಿನ್ನೆ ಮೊನ್ನೆಯಿಂದ ಮಂಡ್ಯದಲ್ಲೂ ಸಾಕಷ್ಟು ಮಳೆಯಾಗಿದೆ. ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ಸಿಡಿಎಸ್ ನಾಲೆ ಒಡೆದಿದೆ. ರವಿ ಶಾಸಕರಾದ ಬಳಿಕ ತಡೆಗೋಡೆ ನಿರ್ಮಾಣ ಮಾಡಿಸಿದ್ದರು. ತಡೆಗೋಡೆ ನಿರ್ಮಾಣದಿಂದ ಹೆಚ್ಚಿನ ತೊಂದರೆ ಆಗುತ್ತಿಲ್ಲ. ರಸ್ತೆ, ಒಳಚರಂಡಿ ಕಾಮಗಾರಿ ಶೀಘ್ರ ಆರಂಭಿಸುತ್ತೇವೆ ಎಂದು ಹೇಳಿದರು.
ಮೊನ್ನೆಯ ಮಳೆಗೆ ಮಂಡ್ಯ ಜಿಲ್ಲೆಯಲ್ಲಿ 80 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು ಕೂಡಲೇ ಬೆಳೆಹಾನಿ ಬಗ್ಗೆ ಸರ್ವೆ ಮಾಡಿಸಿ ಪರಿಹಾರ ನೀಡುತ್ತೇವೆ ಎಂದು ಸಚಿವರು ತಿಳಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…