ಮಂಡ್ಯ

ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 142 ಮನೆಗಳು ನಿರ್ಮಾಣ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 167 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು ಇಲ್ಲಿಯವರೆಗೆ 142 ಮನೆಗಳನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 7 ಮನೆಗಳ ಕಾಮಗಾರಿ ಪ್ರಾರಂಭವಾಗಿದೆ, 2 ಮನೆಗಳಿಗೆ ಫೌಂಡೇಶನ್ ಹಾಕಲಾಗಿದೆ, 5 ಲೆನ್ಟಲ್ ಹಾಗೂ 3 ರೂಫ್ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ಪುರಸಭೆ ವ್ಯಾಪ್ತಿಯಲ್ಲಿ ಕೆ.ಎಂ.ಎಫ್ ಮಳಿಗೆಗಳನ್ನು ತೆರೆಯಲು ಸೂಕ್ತ ಜಾಗ ಗುರುತಿಸಿ, ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ಮಾಡಿ, ಮಾನ್ಯ ಹೈಕೋರ್ಟ್ ನಿರ್ದೇಶನದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಬೀದಿ ನಾಯಿಗಳಿಗೆ ಲಸಿಕೆ ನೀಡಲು ನಗರ ಸಭೆಗೆ 60 ಲಕ್ಷ ಹಾಗೂ ಪುರಸಭೆಗಳಿಗೆ 10 ಲಕ್ಷ ನೀಡಲಾಗಿದೆ ಶೀಘ್ರವಾಗಿ ಬೀದಿ ನಾಯಿಗಳಿಗೆ ಲಸಿಕೆ ನೀಡಲು ಅಗತ್ಯ ಕ್ರಮವಹಿಸಿ ಎಂದು ಹೇಳಿದರು.

ಇದನ್ನು ಓದಿ: ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ: ಚಿಕ್ಕಲಿಂಗಯ್ಯ

ಕಾಲಕಾಲಕ್ಕೆ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸಬೇಕು, ಕಳೆದ ಬಾರಿಗೆ ಹೋಲಿಸಿದರೆ ಸದರಿ ಮಾಹೆಯ ಆಸ್ತಿ ತೆರಿಗೆ ವಸೂಲಾತಿಯನ್ನು ಶೇಕಡಾ.5.85ರಷ್ಟು ಹೆಚ್ಚಿಸಲಾಗಿದೆ. ಒಟ್ಟಾರೆ ಶೇ.80.43 ರಷ್ಟು ಆಸ್ತಿ ತೆರಿಗೆ ವಸೂಲಾತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 9 ಇಂದಿರಾ ಕ್ಯಾಂಟೀನ್ ಗಳು ಕಾರ್ಯ ನಿರ್ವಹಿಸುತ್ತಿವೆ, ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರದ ಗುಣಮಟ್ಟವನ್ನು ಕಾಪಾಡಬೇಕು, ಅಧಿಕಾರಿಗಳು ಕಾಲ ಕಾಲಕ್ಕೆ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಇ-ಖಾತಾ ಅಭಿಯಾನ ಮಾರ್ಚ್ 2025 ರವರೆಗೂ ಎ ಮತ್ತು ಬಿ ಖಾತಾ ಸೇರಿ ಒಟ್ಟು 47914 ಖಾತೆಗಳನ್ನು ನೀಡಲಾಗಿದೆ, ಮಾರ್ಚ್ 2025 ರಿಂದ ಇಲ್ಲಿಯವರೆಗೆ ಎ ಮತ್ತು ಬಿ ಖಾತಾ ಸೇರಿ ಒಟ್ಟು 11875 ಖಾತೆಗಳನ್ನು ನೀಡಲಾಗಿದೆ, ಇನ್ನೂ 26514 ಖಾತೆಗಳು ಬಾಕಿ ಉಳಿದಿದೆ ಎಂದು ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಪ್ರಥಾಪ್, ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೆರೆ, ನಗರಸಭೆ ಪೌರಾಯುಕ್ತೆ ಪಂಪಶ್ರೀ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago