ಮಂಡ್ಯ: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಹಾಗೂ ರೈತರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವುದು. ಯಾವುದೇ ತೊಂದರೆಯಿದ್ದಲ್ಲ ತಕ್ಷಣ ತಮ್ಮ ತಾಲ್ಲೂಕು ಅಥವಾ ಜಿಲ್ಲಾ ಕಂಟ್ರೋಲ್ ರೂಂ ಗೆ ಕರೆ ಮಾಡಿ ರಕ್ಷಣೆ ಪಡೆದುಕೊಳ್ಳುವುದು. ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.
ನದಿ ಪಾತ್ರದಲ್ಲಿ ಹಾಗೂ ಹೆಚ್ಚು ನೀರು ಹರಿಯುವ ಪ್ರದೇಶದಲ್ಲಿ ನೀರಿನ ರಭಸದ ಬಗ್ಗೆ ಹೇಳಲು ಸಾಧ್ಯವಿಲ್ಲ. ಸೆಲ್ಫಿ ತೆಗೆದುಕೊಳ್ಳುವ ಅಥವಾ ನೀರಿನಲ್ಲಿ ಆಟವಾಡುವ ಉತ್ಸಾಹದಲ್ಲಿ ಪ್ರಾಣಕ್ಕೆ ತೊಂದರೆ ಮಾಡಿಕೊಳ್ಳಬೇಡಿ. ನದಿ ಪಾತ್ರದ ಪ್ರದೇಶದಲ್ಲಿ ಎಚ್ಚರಿಕೆ ವಹಿಸಿ.
ಮಳವಳ್ಳಿ ತಾಲ್ಲೂಕಿನ ಕೊನೆಯ ಭಾಗದವರೆಗೆ ನೀರು ಹರಿಸಲು ಸಹ ಕ್ರಮ ವಹಿಸಲಾಗುತ್ತಿದೆ. ರೈತರು, ಸಾರ್ವಜನಿಕರು ಅದರಲ್ಲೂ ಸಹ ಮಕ್ಕಳು ಎಚ್ಚರಿಕೆಯಿಂದ ಇರುವಂತೆ ಸಚಿವರು ಕೋರಿದ್ದಾರೆ.
ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್ವೇರ್ ಉದ್ಯೋಗಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…
ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…