ಮಂಡ್ಯ

ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ 1779243 ಅಂತಿಮ ಮತದಾರರು: ಡಾ. ಕುಮಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಪ್ರಕಟವಾಗಿರುವ ಅಂತಿಮ ಮತದಾರರ ಪಟ್ಟಿಯಂತೆ 17,79,243 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಮಳವಳ್ಳಿಯಲ್ಲಿ ಗಂಡು-126118 ಹೆಣ್ಣು-127487, ತೃತೀಯ ಲಿಂಗಿಗಳು-23, ಒಟ್ಟು 253628 ಮತದಾರರು, ಮದ್ದೂರಿನಲ್ಲಿ ಗಂಡು-104280, ಹೆಣ್ಣು-111443, ತೃತೀಯ ಲಿಂಗಿಗಳು-22, ಒಟ್ಟು 215745 ಮತದಾರರು, ಮೇಲುಕೋಟೆಯಲ್ಲಿ ಗಂಡು-100379, ಹೆಣ್ಣು-103010, ತೃತೀಯ ಲಿಂಗಿಗಳು-9, ಒಟ್ಟು 203398 ಮತದಾರರು, ಮಂಡ್ಯದಲ್ಲಿ ಗಂಡು-111868, ಹೆಣ್ಣು-117759, ತೃತೀಯ ಲಿಂಗಿಗಳು- 36, ಒಟ್ಟು 229663 ಮತದಾರರು, ಶ್ರೀರಂಗಪಟ್ಟಣ ಗಂಡು-106157, ಹೆಣ್ಣು-111431, ತೃತೀಯ ಲಿಂಗಿಗಳು- 44, ಒಟ್ಟು 217632 ಮತದಾರರು, ನಾಗಮಂಗಲದಲ್ಲಿ ಗಂಡು-107760, ಹೆಣ್ಣು-108783, ತೃತೀಯ ಲಿಂಗಿಗಳು- 11, ಒಟ್ಟು 216554 ಮತದಾರರು, ಕೃಷ್ಣರಾಜಪೇಟೆಯಲ್ಲಿ ಗಂಡು-111542 ಹೆಣ್ಣು-112284 ತೃತೀಯ ಲಿಂಗಿಗಳು- 11, ಒಟ್ಟು 223837 ಮತದಾರರು, ಕೆ. ಆರ್ ನಗರದಲ್ಲಿ ಗಂಡು-108008, ಹೆಣ್ಣು-110766, ತೃತೀಯ ಲಿಂಗಿಗಳು- 12, ಒಟ್ಟು 218786 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಏ.26 ರಂದು ನಡೆಯುವ ಮತದಾನಕ್ಕಾಗಿ 2076 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಳವಳ್ಳಿ- 272, ಮದ್ದೂರು-254, ಮೇಲುಕೋಟೆ-264, ಮಂಡ್ಯ-264, ಶ್ರೀರಂಗಪಟ್ಟಣ-249, ನಾಗಮಂಗಲ-260, ಕೃಷ್ಣರಾಜಪೇಟೆ-261, ಕೆ. ಆರ್ ನಗರ-252 ಒಟ್ಟು 2076 ಮತಗಟ್ಟೆಗಳಿವೆ ಎಂದರು.

ಮಳವಳ್ಳಿ – 137, ಮದ್ದೂರು – 127, ಮೇಲುಕೋಟೆ – 192, ಮಂಡ್ಯ – 131, ಶ್ರೀರಂಗಪಟ್ಟಣ – 125, ನಾಗಮಂಗಲ – 150, ಕೃಷ್ಣರಾಜಪೇಟೆ – 132, ಕೆ. ಆರ್. ನಗರ – 126, ಒಟ್ಟು – 1120 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅನ್ನು ಅಳವಡಿಸಲಾಗುವುದು.

ಮತಗಟ್ಟೆಯ 100 ಮೀಟರ್ ಅಂತರದೊಳಗೆ ಮೊಬೈಲ್ ಬಳಕೆ ನಿಷೇಧವಿದೆ ಹಾಗೂ ಎಲ್ಲಾ ರೀತಿಯ ಪ್ರಚಾರ ನಿರ್ಬಂಧಿಸಿದೆ. ಮತಗಟ್ಟೆಯಿಂದ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಟೆಂಟ್ ಗಳನ್ನು ತೆರೆಯುವಂತಿಲ್ಲ ಹಾಗೂ ಮತಗಟ್ಟೆಯ 200 ಮೀ. ನಿಂದ ಹೊರಗೆ ತಾತ್ಕಾಲಿಕ ಬೂತ್ ತೆರೆಯಲು ಬಯಸಿದ್ದಲ್ಲಿ ಸ್ಥಳೀಯ ಪ್ರಾಧಿಕಾರದಿಂದ ಹಾಗೂ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಈ ಟೆಂಟ್ ನಲ್ಲಿ ಕೇವಲ ಇಬ್ಬರು ಕಾರ್ಯಕರ್ತರಿಗೆ ಸಾಕಾಗುವಷ್ಟು ಟಾರ್ಪಲಿನ್ ಅಥವಾ ಛತ್ರಿ ಮೇಲ್ಚಾವಣಿ ಹೊಂದಬಹುದಾಗಿದ್ದು, 2 ಕುರ್ಚಿ ಮತ್ತು ಮೇಜು ಹೊಂದಲು ಅವಕಾಶವಿರುತ್ತದೆ ಎಂದು ತಿಳಿಸಿದರು.

ರಾಜಕೀಯ ಅಭ್ಯರ್ಥಿಗಳು ಮತದಾನದ ಅಂತ್ಯದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರಗಳನ್ನು ಕೈಗೊಳ್ಳಲು ಅನುಮತಿ ಇರುವುದಿಲ್ಲ. ಧ್ವನಿ ವರ್ಧಕಗಳ ಬಳಕೆ ಮಾಡಲು ಅವಕಾಶವಿಲ್ಲ ಆದರೆ ಮನೆಮನೆ ಭೇಟಿಗೆ ಅವಕಾಶವಿರುತ್ತದೆ.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್. ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಚುನಾವಣಾ ತಹಶೀಲ್ದಾರ್ ವೆಂಕಟಾಚಲಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಚ್. ಎಸ್ ನಿರ್ಮಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

9 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

9 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

10 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

10 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

10 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

11 hours ago