ಮಂಡ್ಯ

ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ 1779243 ಅಂತಿಮ ಮತದಾರರು: ಡಾ. ಕುಮಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಪ್ರಕಟವಾಗಿರುವ ಅಂತಿಮ ಮತದಾರರ ಪಟ್ಟಿಯಂತೆ 17,79,243 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಮಳವಳ್ಳಿಯಲ್ಲಿ ಗಂಡು-126118 ಹೆಣ್ಣು-127487, ತೃತೀಯ ಲಿಂಗಿಗಳು-23, ಒಟ್ಟು 253628 ಮತದಾರರು, ಮದ್ದೂರಿನಲ್ಲಿ ಗಂಡು-104280, ಹೆಣ್ಣು-111443, ತೃತೀಯ ಲಿಂಗಿಗಳು-22, ಒಟ್ಟು 215745 ಮತದಾರರು, ಮೇಲುಕೋಟೆಯಲ್ಲಿ ಗಂಡು-100379, ಹೆಣ್ಣು-103010, ತೃತೀಯ ಲಿಂಗಿಗಳು-9, ಒಟ್ಟು 203398 ಮತದಾರರು, ಮಂಡ್ಯದಲ್ಲಿ ಗಂಡು-111868, ಹೆಣ್ಣು-117759, ತೃತೀಯ ಲಿಂಗಿಗಳು- 36, ಒಟ್ಟು 229663 ಮತದಾರರು, ಶ್ರೀರಂಗಪಟ್ಟಣ ಗಂಡು-106157, ಹೆಣ್ಣು-111431, ತೃತೀಯ ಲಿಂಗಿಗಳು- 44, ಒಟ್ಟು 217632 ಮತದಾರರು, ನಾಗಮಂಗಲದಲ್ಲಿ ಗಂಡು-107760, ಹೆಣ್ಣು-108783, ತೃತೀಯ ಲಿಂಗಿಗಳು- 11, ಒಟ್ಟು 216554 ಮತದಾರರು, ಕೃಷ್ಣರಾಜಪೇಟೆಯಲ್ಲಿ ಗಂಡು-111542 ಹೆಣ್ಣು-112284 ತೃತೀಯ ಲಿಂಗಿಗಳು- 11, ಒಟ್ಟು 223837 ಮತದಾರರು, ಕೆ. ಆರ್ ನಗರದಲ್ಲಿ ಗಂಡು-108008, ಹೆಣ್ಣು-110766, ತೃತೀಯ ಲಿಂಗಿಗಳು- 12, ಒಟ್ಟು 218786 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಏ.26 ರಂದು ನಡೆಯುವ ಮತದಾನಕ್ಕಾಗಿ 2076 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಳವಳ್ಳಿ- 272, ಮದ್ದೂರು-254, ಮೇಲುಕೋಟೆ-264, ಮಂಡ್ಯ-264, ಶ್ರೀರಂಗಪಟ್ಟಣ-249, ನಾಗಮಂಗಲ-260, ಕೃಷ್ಣರಾಜಪೇಟೆ-261, ಕೆ. ಆರ್ ನಗರ-252 ಒಟ್ಟು 2076 ಮತಗಟ್ಟೆಗಳಿವೆ ಎಂದರು.

ಮಳವಳ್ಳಿ – 137, ಮದ್ದೂರು – 127, ಮೇಲುಕೋಟೆ – 192, ಮಂಡ್ಯ – 131, ಶ್ರೀರಂಗಪಟ್ಟಣ – 125, ನಾಗಮಂಗಲ – 150, ಕೃಷ್ಣರಾಜಪೇಟೆ – 132, ಕೆ. ಆರ್. ನಗರ – 126, ಒಟ್ಟು – 1120 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅನ್ನು ಅಳವಡಿಸಲಾಗುವುದು.

ಮತಗಟ್ಟೆಯ 100 ಮೀಟರ್ ಅಂತರದೊಳಗೆ ಮೊಬೈಲ್ ಬಳಕೆ ನಿಷೇಧವಿದೆ ಹಾಗೂ ಎಲ್ಲಾ ರೀತಿಯ ಪ್ರಚಾರ ನಿರ್ಬಂಧಿಸಿದೆ. ಮತಗಟ್ಟೆಯಿಂದ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಟೆಂಟ್ ಗಳನ್ನು ತೆರೆಯುವಂತಿಲ್ಲ ಹಾಗೂ ಮತಗಟ್ಟೆಯ 200 ಮೀ. ನಿಂದ ಹೊರಗೆ ತಾತ್ಕಾಲಿಕ ಬೂತ್ ತೆರೆಯಲು ಬಯಸಿದ್ದಲ್ಲಿ ಸ್ಥಳೀಯ ಪ್ರಾಧಿಕಾರದಿಂದ ಹಾಗೂ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಈ ಟೆಂಟ್ ನಲ್ಲಿ ಕೇವಲ ಇಬ್ಬರು ಕಾರ್ಯಕರ್ತರಿಗೆ ಸಾಕಾಗುವಷ್ಟು ಟಾರ್ಪಲಿನ್ ಅಥವಾ ಛತ್ರಿ ಮೇಲ್ಚಾವಣಿ ಹೊಂದಬಹುದಾಗಿದ್ದು, 2 ಕುರ್ಚಿ ಮತ್ತು ಮೇಜು ಹೊಂದಲು ಅವಕಾಶವಿರುತ್ತದೆ ಎಂದು ತಿಳಿಸಿದರು.

ರಾಜಕೀಯ ಅಭ್ಯರ್ಥಿಗಳು ಮತದಾನದ ಅಂತ್ಯದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರಗಳನ್ನು ಕೈಗೊಳ್ಳಲು ಅನುಮತಿ ಇರುವುದಿಲ್ಲ. ಧ್ವನಿ ವರ್ಧಕಗಳ ಬಳಕೆ ಮಾಡಲು ಅವಕಾಶವಿಲ್ಲ ಆದರೆ ಮನೆಮನೆ ಭೇಟಿಗೆ ಅವಕಾಶವಿರುತ್ತದೆ.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್. ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಚುನಾವಣಾ ತಹಶೀಲ್ದಾರ್ ವೆಂಕಟಾಚಲಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಚ್. ಎಸ್ ನಿರ್ಮಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

7 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

10 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

11 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

12 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

13 hours ago