ಮಂಡ್ಯ

ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ 1779243 ಅಂತಿಮ ಮತದಾರರು: ಡಾ. ಕುಮಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಪ್ರಕಟವಾಗಿರುವ ಅಂತಿಮ ಮತದಾರರ ಪಟ್ಟಿಯಂತೆ 17,79,243 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಮಳವಳ್ಳಿಯಲ್ಲಿ ಗಂಡು-126118 ಹೆಣ್ಣು-127487, ತೃತೀಯ ಲಿಂಗಿಗಳು-23, ಒಟ್ಟು 253628 ಮತದಾರರು, ಮದ್ದೂರಿನಲ್ಲಿ ಗಂಡು-104280, ಹೆಣ್ಣು-111443, ತೃತೀಯ ಲಿಂಗಿಗಳು-22, ಒಟ್ಟು 215745 ಮತದಾರರು, ಮೇಲುಕೋಟೆಯಲ್ಲಿ ಗಂಡು-100379, ಹೆಣ್ಣು-103010, ತೃತೀಯ ಲಿಂಗಿಗಳು-9, ಒಟ್ಟು 203398 ಮತದಾರರು, ಮಂಡ್ಯದಲ್ಲಿ ಗಂಡು-111868, ಹೆಣ್ಣು-117759, ತೃತೀಯ ಲಿಂಗಿಗಳು- 36, ಒಟ್ಟು 229663 ಮತದಾರರು, ಶ್ರೀರಂಗಪಟ್ಟಣ ಗಂಡು-106157, ಹೆಣ್ಣು-111431, ತೃತೀಯ ಲಿಂಗಿಗಳು- 44, ಒಟ್ಟು 217632 ಮತದಾರರು, ನಾಗಮಂಗಲದಲ್ಲಿ ಗಂಡು-107760, ಹೆಣ್ಣು-108783, ತೃತೀಯ ಲಿಂಗಿಗಳು- 11, ಒಟ್ಟು 216554 ಮತದಾರರು, ಕೃಷ್ಣರಾಜಪೇಟೆಯಲ್ಲಿ ಗಂಡು-111542 ಹೆಣ್ಣು-112284 ತೃತೀಯ ಲಿಂಗಿಗಳು- 11, ಒಟ್ಟು 223837 ಮತದಾರರು, ಕೆ. ಆರ್ ನಗರದಲ್ಲಿ ಗಂಡು-108008, ಹೆಣ್ಣು-110766, ತೃತೀಯ ಲಿಂಗಿಗಳು- 12, ಒಟ್ಟು 218786 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಏ.26 ರಂದು ನಡೆಯುವ ಮತದಾನಕ್ಕಾಗಿ 2076 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಳವಳ್ಳಿ- 272, ಮದ್ದೂರು-254, ಮೇಲುಕೋಟೆ-264, ಮಂಡ್ಯ-264, ಶ್ರೀರಂಗಪಟ್ಟಣ-249, ನಾಗಮಂಗಲ-260, ಕೃಷ್ಣರಾಜಪೇಟೆ-261, ಕೆ. ಆರ್ ನಗರ-252 ಒಟ್ಟು 2076 ಮತಗಟ್ಟೆಗಳಿವೆ ಎಂದರು.

ಮಳವಳ್ಳಿ – 137, ಮದ್ದೂರು – 127, ಮೇಲುಕೋಟೆ – 192, ಮಂಡ್ಯ – 131, ಶ್ರೀರಂಗಪಟ್ಟಣ – 125, ನಾಗಮಂಗಲ – 150, ಕೃಷ್ಣರಾಜಪೇಟೆ – 132, ಕೆ. ಆರ್. ನಗರ – 126, ಒಟ್ಟು – 1120 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅನ್ನು ಅಳವಡಿಸಲಾಗುವುದು.

ಮತಗಟ್ಟೆಯ 100 ಮೀಟರ್ ಅಂತರದೊಳಗೆ ಮೊಬೈಲ್ ಬಳಕೆ ನಿಷೇಧವಿದೆ ಹಾಗೂ ಎಲ್ಲಾ ರೀತಿಯ ಪ್ರಚಾರ ನಿರ್ಬಂಧಿಸಿದೆ. ಮತಗಟ್ಟೆಯಿಂದ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಟೆಂಟ್ ಗಳನ್ನು ತೆರೆಯುವಂತಿಲ್ಲ ಹಾಗೂ ಮತಗಟ್ಟೆಯ 200 ಮೀ. ನಿಂದ ಹೊರಗೆ ತಾತ್ಕಾಲಿಕ ಬೂತ್ ತೆರೆಯಲು ಬಯಸಿದ್ದಲ್ಲಿ ಸ್ಥಳೀಯ ಪ್ರಾಧಿಕಾರದಿಂದ ಹಾಗೂ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಈ ಟೆಂಟ್ ನಲ್ಲಿ ಕೇವಲ ಇಬ್ಬರು ಕಾರ್ಯಕರ್ತರಿಗೆ ಸಾಕಾಗುವಷ್ಟು ಟಾರ್ಪಲಿನ್ ಅಥವಾ ಛತ್ರಿ ಮೇಲ್ಚಾವಣಿ ಹೊಂದಬಹುದಾಗಿದ್ದು, 2 ಕುರ್ಚಿ ಮತ್ತು ಮೇಜು ಹೊಂದಲು ಅವಕಾಶವಿರುತ್ತದೆ ಎಂದು ತಿಳಿಸಿದರು.

ರಾಜಕೀಯ ಅಭ್ಯರ್ಥಿಗಳು ಮತದಾನದ ಅಂತ್ಯದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರಗಳನ್ನು ಕೈಗೊಳ್ಳಲು ಅನುಮತಿ ಇರುವುದಿಲ್ಲ. ಧ್ವನಿ ವರ್ಧಕಗಳ ಬಳಕೆ ಮಾಡಲು ಅವಕಾಶವಿಲ್ಲ ಆದರೆ ಮನೆಮನೆ ಭೇಟಿಗೆ ಅವಕಾಶವಿರುತ್ತದೆ.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್. ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಚುನಾವಣಾ ತಹಶೀಲ್ದಾರ್ ವೆಂಕಟಾಚಲಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಚ್. ಎಸ್ ನಿರ್ಮಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

8 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

9 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

9 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago