ಮಂಡ್ಯ: ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಮತ್ತು ಸ್ಪಂದನ ಆಸ್ಪತ್ರೆಯ ಸಹಯೋಗದೊಂದಿಗೆ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮ ಮಂಡ್ಯದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿರವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಛಾಯಾಚಿತ್ರಗ್ರಾಹಕರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ನೀಡುವ ಪ್ರಾಮಾಣಿಕವಾಗಿ ದೊರಕಿಸುವ ಕೆಲಸ ಮಾಡುವುದಾಗಿ ತಿಳಿಸಿದರು.
ಶಾಸಕ ಪಿ. ರವಿಕುಮಾರ್ ಗಣಿಗ ಮಾತನಾಡಿ, ನಿವೇಶನ ಇಲ್ಲದವರಿಗೆ ಹಾಗೂ ವಸತಿ ಇಲ್ಲದ ಛಾಯಾಗ್ರಹಕರಿಗೆ ಸರ್ಕಾರದಿಂದ ನಿವೇಶನ ಹಾಗೂ ವಸತಿಯನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 65ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಛಾಯಾಗ್ರಹಕ ಮಕ್ಕಳಿಗೆ ಹಾಗೂ ಹಿರಿಯ ಛಾಯಾಗ್ರಾಹಕರಿಗೆ ಛಾಯಾ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟಿ ಭಾವನ, ಮಂಡ್ಯ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ವಿನೋದ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…