ಮಂಡ್ಯ

ಆಗಸ್ಟ್ 1 ರಂದು ವ್ಯಸನ ಮುಕ್ತ ದಿನಾಚರಣೆ

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ಎಸ್.ಬಿ.ಸಮುದಾಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ತಿಳಿಸಿದರು.

ಅವರು ಶುಕ್ರವಾರ(ಜು.27) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮದ್ಯಪಾನ, ಧೂಮಪಾನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಬಲಿಯಾಗಿ ಮಕ್ಕಳು ತಮ್ಮ ಜೀವನದ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಹಾಗೂ ಗುರಿ ಸಾಧಿಸಲು ವಿಫಲರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಕೈ ಜೋಡಿಸ ಬೇಕು ಎಂದರು.

ಜಾಗೃತಿ ಜಾಥಾ ಅಗಸ್ಟ್ 1 ರಂದು ಬೆಳಿಗ್ಗೆ 10 ಗಂಟೆಗೆ ಸಂಜಯ್ ಸರ್ಕಲ್ ಬಳಿ ಮಾನವ ಸರಪಳಿ‌ ರಚಿಸಿ ಘೋಷವಾಕ್ಯದೊಂದಿಗೆ ಸಂಜಯ್ ಸರ್ಕಲ್ ನಿಂದ ಎಸ್.ಬಿ. ಸಮುದಾಯ ಭವನದವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ವೇದಿಕೆ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ನುರಿತ ಮನೋ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಪ್ರತಿಜ್ಞೆ ವಿಧಿ ಸ್ವೀಕಾರ
ಅಗಸ್ಟ್1 ರಂದು ಶಾಲಾ ಮತ್ತು ಕಾಲೇಜುಗಳಲ್ಲಿ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳಿಗೆ ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಪ್ರತಿಜ್ಙಾ ವಿಧಿ ಬೋಧಿಸುವಂತೆ ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವ್ಯಸನ ಮುಕ್ತ ದಿನಾಚರಣೆ ಆಚರಿಸುವಂತೆ ಹೇಳಿದರು.

ಪ್ರಬಂಧ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಸೇನನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಪ್ರೌಢಶಾಲಾ ಹಾಗೂ ಪದವಿ ಪೂರ್ವ ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧ ಆಯೋಜಿಸಿ ವಿಜೇತರಿಗೆ ಕಾರ್ಯಕ್ರಮದ ದಿನ ಬಹುಮಾನ ವಿತರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ರೋಟರಿ ಸಂಸ್ಥೆ ಅಧ್ಯಕ್ಷೆ ಅನುಪಮ ಸೇರಿದಂತೆ ‌ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

38 mins ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

1 hour ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

2 hours ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

2 hours ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

3 hours ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

3 hours ago