ಮದ್ದೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ.
ಕಾರಿನಲ್ಲಿದ್ದ ಬೆಂಗಳೂರು ಮೂಲದ ಮಕ್ಸೂದ್ (21), ಅಯಾನ್ (25) ಮೃತಪಟ್ಟವರು. ಮುಜಾಹಿದ್ ಪಾಷ, ಬಸವರಾಜು, ಪಾರ್ವತಿ, ನಾಗರತ್ನ ಹಾಗೂ ನಾಗರಾಜು ಗಾಯಗೊಂಡ ವ್ಯಕ್ತಿಗಳಾಗಿದ್ದು, ಇವರಿಗೆ ಚನ್ನಪಟ್ಟಣದ ಚಾಮುಂಡೇಶ್ವರಿ ಆಸ್ಪತ್ರೆ ಮತ್ತು ಮದ್ದೂರಿನ ಕೆ.ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಮೈಸೂರಿಗೆ ಸ್ಕೋಡಾ ಕಾರಿನಲ್ಲಿ ಮಕ್ಸೂದ್, ಅಯಾನ್ ಹಾಗೂ ಮುಜಾಹಿದ್ ಪಾಷ ಪ್ರಯಾಣಿಸುತ್ತಿದ್ದರು. ಈ ಕಾರು ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೊಯಟಾ ಇತಿಯೋಸ್ ಮತ್ತು ಇನ್ನೋವಾ ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇನ್ನೊಂದು ಕಾರಿನಲ್ಲಿದ್ದ ಬೆಂಗಳೂರು ಮೂಲದ ಪಾರ್ವತಿ, ಬಸವರಾಜು, ನಾಗರತ್ನ ಹಾಗೂ ನಾಗರಾಜು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳ ತೆರವು ಕಾರ್ಯಾಚರಣೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆ ಕುರಿತು ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…