ಮಂಡ್ಯ

ಕಾರುಗಳ ನಡುವೆ ಡಿಕ್ಕಿ : ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

ಮದ್ದೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ.

ಕಾರಿನಲ್ಲಿದ್ದ ಬೆಂಗಳೂರು ಮೂಲದ ಮಕ್ಸೂದ್ (21), ಅಯಾನ್ (25) ಮೃತಪಟ್ಟವರು. ಮುಜಾಹಿದ್ ಪಾಷ, ಬಸವರಾಜು, ಪಾರ್ವತಿ, ನಾಗರತ್ನ ಹಾಗೂ ನಾಗರಾಜು ಗಾಯಗೊಂಡ ವ್ಯಕ್ತಿಗಳಾಗಿದ್ದು, ಇವರಿಗೆ ಚನ್ನಪಟ್ಟಣದ ಚಾಮುಂಡೇಶ್ವರಿ ಆಸ್ಪತ್ರೆ ಮತ್ತು ಮದ್ದೂರಿನ ಕೆ.ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮೈಸೂರಿಗೆ ಸ್ಕೋಡಾ ಕಾರಿನಲ್ಲಿ ಮಕ್ಸೂದ್, ಅಯಾನ್ ಹಾಗೂ ಮುಜಾಹಿದ್ ಪಾಷ ಪ್ರಯಾಣಿಸುತ್ತಿದ್ದರು. ಈ ಕಾರು ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೊಯಟಾ ಇತಿಯೋಸ್ ಮತ್ತು ಇನ್ನೋವಾ ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇನ್ನೊಂದು ಕಾರಿನಲ್ಲಿದ್ದ ಬೆಂಗಳೂರು ಮೂಲದ ಪಾರ್ವತಿ, ಬಸವರಾಜು, ನಾಗರತ್ನ ಹಾಗೂ ನಾಗರಾಜು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳ ತೆರವು ಕಾರ್ಯಾಚರಣೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆ ಕುರಿತು ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago