ಭಾರತೀನಗರ: ಇಲ್ಲಿಗೆ ಸಮೀಪದ ಕ್ಯಾತಘಟ್ಟ ಹೆಬ್ಬಾಳದಲ್ಲಿ ಶಿಂಷಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಆಲಭುಜನಹಳ್ಳಿ ಗ್ರಾಮದ ಸಿದ್ದರಾಜು ಅವರ ಪುತ್ರ ಎ.ಎಸ್.ಚೇತನ್(16) ಹಾಗೂ ಸ್ವಾಮಿ ಅವರ ಪುತ್ರ ದರ್ಶನ್(19) ಎಂಬವರು ಈಜಲು ಹೋಗಿ ಮೃತಪಟ್ಟವರು.
ಈ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಕ್ಯಾತಘಟ್ಟ ಗ್ರಾಮದ ಬಳಿ ಇರುವ ಶಿಂಷ ನದಿಯಲ್ಲಿ ಈಜಲು ಹೋಗಿದ್ದಾಗ ಸುಳಿಗೆ ಸಿಲುಕಿ ಸಾವನಪ್ಪಿದ್ದಾರೆಂದು ತಿಳಿದು ಬಂದಿದೆ.
ಚೇತನ್ ಎಂಬಾತ ಭಾರತೀ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾಗಿದ್ದ, ದರ್ಶನ್ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು ಎನ್ನಲಾಗಿದೆ.
ಯುವಕರು ಮೃತಪಟ್ಟ ಸುದ್ದಿ ತಿಳಿದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಆಲಭುಜನಹಳ್ಳಿ ಗ್ರಾಮಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮವಾದ ಆಲಭುಜನಹಳ್ಳಿಯಲ್ಲಿ ನೆರವೇರಿತು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…