ಭಾರತೀನಗರ: ಇಲ್ಲಿಗೆ ಸಮೀಪದ ಕ್ಯಾತಘಟ್ಟ ಹೆಬ್ಬಾಳದಲ್ಲಿ ಶಿಂಷಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಆಲಭುಜನಹಳ್ಳಿ ಗ್ರಾಮದ ಸಿದ್ದರಾಜು ಅವರ ಪುತ್ರ ಎ.ಎಸ್.ಚೇತನ್(16) ಹಾಗೂ ಸ್ವಾಮಿ ಅವರ ಪುತ್ರ ದರ್ಶನ್(19) ಎಂಬವರು ಈಜಲು ಹೋಗಿ ಮೃತಪಟ್ಟವರು.
ಈ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಕ್ಯಾತಘಟ್ಟ ಗ್ರಾಮದ ಬಳಿ ಇರುವ ಶಿಂಷ ನದಿಯಲ್ಲಿ ಈಜಲು ಹೋಗಿದ್ದಾಗ ಸುಳಿಗೆ ಸಿಲುಕಿ ಸಾವನಪ್ಪಿದ್ದಾರೆಂದು ತಿಳಿದು ಬಂದಿದೆ.
ಚೇತನ್ ಎಂಬಾತ ಭಾರತೀ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾಗಿದ್ದ, ದರ್ಶನ್ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು ಎನ್ನಲಾಗಿದೆ.
ಯುವಕರು ಮೃತಪಟ್ಟ ಸುದ್ದಿ ತಿಳಿದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಆಲಭುಜನಹಳ್ಳಿ ಗ್ರಾಮಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮವಾದ ಆಲಭುಜನಹಳ್ಳಿಯಲ್ಲಿ ನೆರವೇರಿತು.
ಗ್ಯಾಂಗ್ಟಕ್: ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿ ಮಕ್ಕಳೊಂದಿಗೆ ಫುಟ್ಬಾಲ್ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್ನಲ್ಲಿ ಮುಂಜಾನೆ ವೇಳೆ ಪ್ರಧಾನಿ…
ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ…
ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…
ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…