ಮಂಡ್ಯ

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ ಆರತಿಗೆ ವಿರೋಧ ಮಾಡಬೇಡಿ, ಸಹಕಾರ ನೀಡಿ

ಮಂಡ್ಯ : “ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ.‌ ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ” ಎಂದರು.

ಕಾವೇರಿ ಆರತಿಗೆ ಸಹಕರಿಸಿ, ವಿರೋಧಿಸಬೇಡಿ
ಕಾವೇರಿ ಆರತಿ ವಿರೋಧ ಮಾಡುವವರಲ್ಲಿ ಅಡ್ಡಿ ಪಡಿಸಬೇಡಿ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ‌ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ” ಎಂದರು.

“ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಬೇಕೆ? ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

“ಭಕ್ತ ಹಾಗೂ ಭಗವಂತನಿಗೆ ವ್ಯಾವಹಾರ ನಡೆಯುವ ಸ್ಥಳ ದೇವಸ್ಥಾನ. ಇಲ್ಲಿ ಜನ ಕುಳಿತುಕೊಳ್ಳಲು ಸ್ಥಳ ಮಾಡಲಾಗುತ್ತಿದೆ. ನೀವು ಏಕೆ ಮನೆಯಲ್ಲಿ ಪ್ರತಿದಿನ ದೇವರ ಪೂಜೆ ಮಾಡುತ್ತೀರಿ. ದೇವರು ಇಲ್ಲದಿದ್ದರೂ ಸೂರ್ಯನಿಗೆ ಏಕೆ ನಮಸ್ಕಾರ ಮಾಡುತ್ತೀರಿ. ನನ್ನ ಮಾತುಗಳು ನೇರ, ದಿಟ್ಟವಾಗಿ ಇರಬಹುದು ಯಾರೂ ಸಹ ಅನ್ಯತಾ ಭಾವಿಸಬಾರದು” ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

6 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

13 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

31 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

1 hour ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

2 hours ago