ಮಂಡ್ಯ

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ ಆರತಿಗೆ ವಿರೋಧ ಮಾಡಬೇಡಿ, ಸಹಕಾರ ನೀಡಿ

ಮಂಡ್ಯ : “ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ.‌ ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ” ಎಂದರು.

ಕಾವೇರಿ ಆರತಿಗೆ ಸಹಕರಿಸಿ, ವಿರೋಧಿಸಬೇಡಿ
ಕಾವೇರಿ ಆರತಿ ವಿರೋಧ ಮಾಡುವವರಲ್ಲಿ ಅಡ್ಡಿ ಪಡಿಸಬೇಡಿ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ‌ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ” ಎಂದರು.

“ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಬೇಕೆ? ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

“ಭಕ್ತ ಹಾಗೂ ಭಗವಂತನಿಗೆ ವ್ಯಾವಹಾರ ನಡೆಯುವ ಸ್ಥಳ ದೇವಸ್ಥಾನ. ಇಲ್ಲಿ ಜನ ಕುಳಿತುಕೊಳ್ಳಲು ಸ್ಥಳ ಮಾಡಲಾಗುತ್ತಿದೆ. ನೀವು ಏಕೆ ಮನೆಯಲ್ಲಿ ಪ್ರತಿದಿನ ದೇವರ ಪೂಜೆ ಮಾಡುತ್ತೀರಿ. ದೇವರು ಇಲ್ಲದಿದ್ದರೂ ಸೂರ್ಯನಿಗೆ ಏಕೆ ನಮಸ್ಕಾರ ಮಾಡುತ್ತೀರಿ. ನನ್ನ ಮಾತುಗಳು ನೇರ, ದಿಟ್ಟವಾಗಿ ಇರಬಹುದು ಯಾರೂ ಸಹ ಅನ್ಯತಾ ಭಾವಿಸಬಾರದು” ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

11 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

12 hours ago