ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ 24 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು

ಮಂಡ್ಯ : ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿ.ಎ.ಪಿ, ಎಂ.ಓ.ಪಿ, ಎಸ್.ಎಸ್.ಪಿ, ಕಾಂಪ್ಲೆಕ್ಸ್ ಸೇರಿದಂತೆ 24,471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಸಗೊಬ್ಬರ ಸಮರ್ಪಕವಾಗಿ ನಿರ್ವಹಣೆ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕುವಾರು ತಹಶೀಲ್ದಾರ್ ಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ. ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರ ದಾಸ್ತಾನುಗಳ ಉಳಿಕೆ , ಹಾಗೂ ಗೊಬ್ಬರಗಳ ದರವನ್ನು ನಮೂದಿಸಿರುವ ಬಗ್ಗೆ ಪರಿಶೀಲಿಸಿ ಎಂದು ಸೂಚಿಸಿದರು.

ಕಾಳಸಂತೆ ಹಾಗೂ ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ರಸಗೊಬ್ಬರ ಮಾರಾಟಗಾರರೊಂದಿಗೆ ಸಭೆ ನಡೆಸಿ ರಸ ಗೊಬ್ಬರಗಳನ್ನು ಸಮರ್ಪಕವಾಗಿ ವಿತರಣೆ ಮಾಡುವಂತೆ ಅರಿವು ಮೂಡಿಸಿ ಎಂದು ಸಲಹೆ ನೀಡಿದರು.

ಪಶುಸಂಗೋಪನೆ ಇಲಾಖೆಯ ವತಿಯಿಂದ ಮೇವು ಬೆಳೆಗಳಿಗೆ ಯೂರಿಯಾ ಬಳಕೆಯನ್ನು ಕಡಿಮೆ ಮಾಡಿಸಬೇಕು ಹಾಗೂ ರೇಷ್ಮೆ ಬೆಳೆಗಳಿಗೂ ಸಹ ಯೂರಿಯಾ ಬಳಕೆ ಮಾಡುವುದರಿಂದ ಗೂಡಿನ ಗುಣಮಟ್ಟ ಕುಂದುತ್ತದೆ ಎಂದು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಬೆಳೆ ನಾಟಿ ಮಾಡುವ ಸಂದರ್ಭದಲ್ಲಿ ರೈತರು ನ್ಯಾನೋ ಯೂರಿಯಾ, ಕಾಂಪ್ಲೆಕ್ಸ್ ಅನ್ನು ಬಳಸಿ. ಮೆಲ್ಗೊಬ್ಬರದ ಸಂದರ್ಭದಲ್ಲಿ ಯೂರಿಯಾ ಬಳಸುವಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ಅಧಿಕಾರಿಗಳು ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶ್ರೀನಿವಾಸ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago