ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು ಬಂಧಿಸಿ, 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭಾರಾಣಿ ಅವರ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಜೂಜಿನಲ್ಲಿ ತೊಡಗಿದ್ದ 29 ಜನರನ್ನು ವಶಕ್ಕೆ ಪಡೆದು, 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಾಮಾನ್ಯವಾಗಿ ಕ್ಲಬ್ಗಳಲ್ಲಿ ರಾತ್ರಿ 11 ಗಂಟೆಯವರೆಗೆ ಜಾಕ್ ಪಾಟ್ ಹಾಗೂ ರಮ್ಮಿ ಆಡಲು ಅವಕಾಶ ನೀಡಲಾಗುತ್ತದೆ. ಆದರೆ, ಅಗ್ರಿ ಕ್ಲಬ್ನಲ್ಲಿ ಸಮಯ ಮೀರಿ ಇತರೆ ಜೂಜಿನಲ್ಲಿ ತಡರಾತ್ರಿಯವರೆಗೆ ಹಲವರು ತೊಡಗಿದ್ದರು ಎನ್ನಲಾಗಿದೆ. ಅಗ್ರಿ ಕ್ಲಬ್ನ ಸದಸ್ಯರಲ್ಲದೆ ರಾಮನಗರ, ಚನ್ನಪಟ್ಟಣ ಭಾಗದಲ್ಲಿ ಹಲವರು ಗೆಸ್ಟ್ ಹೆಸರಿನಲ್ಲಿ ಬಂದು ಇಲ್ಲಿ ಜೂಜಿನಲ್ಲಿ ತೊಡಗಿದ್ದರು ಎನ್ನಲಾಗಿದ್ದು, ಇದರ ಮಾಹಿತಿ ಪಡೆದ ಪೊಲೀಸರು, ಮಧ್ಯರಾತ್ರಿ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕೆಲವರು ಕೌಂಪೌಂಡ್ ನೆಗೆದು ಪರಾರಿಯಾದರು ಎಂದು ತಿಳಿದುಬಂದಿದೆ.
ದಾಳಿ ಸಂದರ್ಭದಲ್ಲಿ ೧೦ ಲಕ್ಷ ರೂ.ಗಿಂತಲೂ ಹೆಚ್ಚು ಹಣ ಸಿಕ್ಕಿರುವುದರಿಂದ ಇಲ್ಲಿ ರಮ್ಮಿ, ಜಾಕ್ಪಾಟ್ ಅಷ್ಟೇ ಅಲ್ಲದೆ ಜೂಜು ನಡೆಯುತ್ತಿರುವ ಅನುಮಾನಗಳು ವ್ಯಕ್ತವಾಗಿದೆ. ಪದೇ ಪದೇ ಅಗ್ರಿ ಕ್ಲಬ್ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…