ಮಂಡ್ಯ

ರಾಜ್ಯ ಬೀಜ ನಿಗಮದ ವತಿಯಿಂದ ಶೇರುದಾರರಿಗೆ 30% ಲಾಭಾಂಶ; ಎನ್.ಚಲುವರಾಯಸ್ವಾಮಿ ಘೋಷಣೆ,

ಬೆಂಗಳೂರು: ಕರ್ನಾಟ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಹೆಬ್ಬಾಳದ ಪಶು ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ 315ನೇ ನಿರ್ದೇಶಕ ಮಂಡಳಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರ ಕೈಗೊಂಡು ನಂತರ ನಡೆದ 51ನೇ ಸರ್ವ ಸದಸ್ಯರ ಸಭೆಯಲ್ಲಿ ಕೃಷಿ ಸಚಿವರು ಈ ವಿಷಯ ಪ್ರಕಟಿಸಿದರು.

ಕಳೆದ ಬಾರಿ ಆಡಿಟ್ ಮುಗಿಯದ ಕಾರಣದಿಂದಾಗಿ ಶೇಕಡಾ 10 ರಷ್ಟು ಲಾಭಾಂಶ ಮಾತ್ರ ನೀಡಲಾಗಿತ್ತು, ಇದೀಗ ಲೆಕ್ಕ ಪರಿಶೋಧನೆ ಅಂತಿಮವಾಗಿರುವುದರಿಂದ 2022-23ನೇ ಸಾಲಿನಲ್ಲಿ 67 ಲಕ್ಷ ಹಾಗೂ 2023-24ನೇ ಸಾಲಿಗೆ 71 ಲಕ್ಷ ಲಾಭಾಂಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬೀಜ ನಿಗಮದ ವತಿಯಿಂದ ಗುಲ್ಬರ್ಗಾದಲ್ಲಿ ಗೋಧಾಮು ನಿರ್ಮಾಣಕ್ಕೂ ಸಹ ಅನುಮೋದನೆ ನೀಡಲಾಗಿದೆ. ಕಳೆದ ವರ್ಷ 2 ಲಕ್ಷ ಕ್ವಿಂಟಾಲ್ ಬೀಜ ಉತ್ಪಾದನೆ ಗುರಿಯ ಬದಲಾಗಿ ಈ ವರ್ಷ 4 ಲಕ್ಷ ಕ್ವಿಂಟಾಲ್ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ನಮ್ಮ ಸರ್ಕಾರ ಕೃಷಿಕರ ಶ್ರೋಯೋಭಿವೃದ್ದಿಗೆ ನಿರಂತರವಾಗಿ ಶ್ರಮಿಸುತ್ತಿದ್ದು ಹೆಚ್ಚಿನ ಆಧ್ಯತೆ ನೀಡುತ್ತಿದೆ. ಕಳೆದ ವರ್ಷ ರಾಜ್ಯವನ್ನು ತೀವ್ರ ಬರ ಕಾಡಿದಾಗಿ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸಕಾಲದಲ್ಲಿ ಸ್ಪಂದಿಸಲಿಲ್ಲ. ನ್ಯಾಯಾಲಯದ ಮೂಲಕ ನಮಗೆ ಸಿಗಬೇಕಿದ್ದ 3454 ಕೋಟಿ ರೂಗಳನ್ನು ಪಡೆದು ರೈತರಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಅಲ್ಲದೇ 1900 ಕೋಟಿ ರೂ ವಿಮೆ ಹಣ ಇತ್ಯರ್ಥಪಡಿಸಲಾಗಿದ್ದು ಇದಲ್ಲದೆ ರೈತರಿಗೆ ತಾತ್ಕಲಿಕ ಪರಿಹಾರ ಸೇರಿದಂತೆ ಒಟ್ಟಾರೆ 6500 ಕೋಟಿ ರೂಗಳನ್ನು ಒದಗಿಸುವ ಮೂಲಕ ಬರದ ತೀವ್ರತೆ ಬಾದಿಸದಂತೆ ಕ್ರಮ ವಹಿಸಲಾಯಿತು ಎಂದು ಕೃಷಿ ಸಚಿವರು ತಿಳಿಸಿದರು.

ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು 82 ಲಕ್ಷ ಹೆಕ್ಟರ್ ಬಿತ್ತನೆಯಾಗಿದೆ. 40 ಲಕ್ಷ ಹೆಕ್ಟೇರ್ ಕಟಾವು ಮಾಡಲಾಗಿದೆ. ಕಳೆದ 10 ದಿನಗಳಿಂದ ಸುರಿದ ತೀವ್ರ ಮಳೆಯಿಂದ ಸುಮಾರು 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು ವರದಿ ತರಿಸಿಕೊಳ್ಳಲಾಗುತ್ತಿದೆ. ನಿಯಮಾನುಸಾರ ಪರಿಹಾರ ದೊರಯಲಿದೆ ಎಂದು ಅವರು ಮಾಹಿತಿ ನೀಡಿದರು..

ರಾಜ್ಯ ಕೃಷಿ ಇಲಾಖೆ ಕೇಂದ್ರದಿAದ ಅತಿ ಹೆಚ್ಚು ಅನುದಾನವನ್ನು ಪಡೆದು ಅದನ್ನು ರೈತರಿಗೆ ವರ್ಗಾವಣೆ ಮಾಡಿದೆ. 650 ಅಧಿಕಾರಿ ಸಿಬ್ಬಂದಿಗೆ ಬಡ್ತಿ ನೀಡಲಾಗಿದ್ದು ಹೊಸದಾಗಿ 950 ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮ ವಹಿಸಲಾಗಿದ್ದು, ಆಡಳಿತಾತ್ಮಕ ಸುಧಾರಣೆಗೂ ಒತ್ತು ನೀಡಲಾಗಿದೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.

ಕೃಷಿಕರು ತಮ್ಮ ಸಂಪ್ರದಾಯಿಕ ಕೃಷಿಯ ಜೊತೆಗೆ ಸಮಗ್ರ ಕೃಷಿ ಬಗ್ಗೆ ಗಮನ ಹರಿಸಬೇಕು. ಸರ್ಕಾರದ ಯೋಜನೆಗಳ ಲಾಭವನ್ನು ಪಡೆದು ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಯ ಅನುಕೂಲಗಳನ್ನು ಅನುಸರಿಸಿ ಪ್ರಗತಿಪರ ರೈತರಾಗಿ ಪರಿವರ್ತನೆಯಾಗಬೇಕು. ಬೀಜ ನಿಗಮ ವತಿಯಿಂದಲೂ ರೈತರಿಗೆ ಹರಿವು ಮತ್ತು ಪ್ರೋತ್ಸಾಹಗಳನ್ನು ನೀಡಲಾಗುತ್ತಿದೆ ಇವೆಲ್ಲವನ್ನು ಸದ್ಬಳಕೆ ಮಾಡಿಕೊಂಡು ಅನುಕೂಲ ಪಡೆಯಬೇಕು ಎಂದು ಕರೆ ನೀಡಿದರು.

ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ್, ರಾಷ್ಟ್ರೀಯ ಬೀಜ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರಾದ ಅಹಮದ್ ರಾಜಾ, ಬೀಜ ನಿಗಮದ ವ್ಯಸ್ಥಾಪಕ ನಿರ್ದೇಶಕರಾದ ದೇವರಾಜ್, ಮತ್ತಿರರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

23 mins ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

2 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

3 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

3 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

4 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

4 hours ago