ಬೆಂಗಳೂರು: ಕರ್ನಾಟ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಹೆಬ್ಬಾಳದ ಪಶು ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ 315ನೇ ನಿರ್ದೇಶಕ ಮಂಡಳಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರ ಕೈಗೊಂಡು ನಂತರ ನಡೆದ 51ನೇ ಸರ್ವ ಸದಸ್ಯರ ಸಭೆಯಲ್ಲಿ ಕೃಷಿ ಸಚಿವರು ಈ ವಿಷಯ ಪ್ರಕಟಿಸಿದರು.
ಕಳೆದ ಬಾರಿ ಆಡಿಟ್ ಮುಗಿಯದ ಕಾರಣದಿಂದಾಗಿ ಶೇಕಡಾ 10 ರಷ್ಟು ಲಾಭಾಂಶ ಮಾತ್ರ ನೀಡಲಾಗಿತ್ತು, ಇದೀಗ ಲೆಕ್ಕ ಪರಿಶೋಧನೆ ಅಂತಿಮವಾಗಿರುವುದರಿಂದ 2022-23ನೇ ಸಾಲಿನಲ್ಲಿ 67 ಲಕ್ಷ ಹಾಗೂ 2023-24ನೇ ಸಾಲಿಗೆ 71 ಲಕ್ಷ ಲಾಭಾಂಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ರಾಜ್ಯದ ಬೀಜ ನಿಗಮದ ವತಿಯಿಂದ ಗುಲ್ಬರ್ಗಾದಲ್ಲಿ ಗೋಧಾಮು ನಿರ್ಮಾಣಕ್ಕೂ ಸಹ ಅನುಮೋದನೆ ನೀಡಲಾಗಿದೆ. ಕಳೆದ ವರ್ಷ 2 ಲಕ್ಷ ಕ್ವಿಂಟಾಲ್ ಬೀಜ ಉತ್ಪಾದನೆ ಗುರಿಯ ಬದಲಾಗಿ ಈ ವರ್ಷ 4 ಲಕ್ಷ ಕ್ವಿಂಟಾಲ್ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.
ನಮ್ಮ ಸರ್ಕಾರ ಕೃಷಿಕರ ಶ್ರೋಯೋಭಿವೃದ್ದಿಗೆ ನಿರಂತರವಾಗಿ ಶ್ರಮಿಸುತ್ತಿದ್ದು ಹೆಚ್ಚಿನ ಆಧ್ಯತೆ ನೀಡುತ್ತಿದೆ. ಕಳೆದ ವರ್ಷ ರಾಜ್ಯವನ್ನು ತೀವ್ರ ಬರ ಕಾಡಿದಾಗಿ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸಕಾಲದಲ್ಲಿ ಸ್ಪಂದಿಸಲಿಲ್ಲ. ನ್ಯಾಯಾಲಯದ ಮೂಲಕ ನಮಗೆ ಸಿಗಬೇಕಿದ್ದ 3454 ಕೋಟಿ ರೂಗಳನ್ನು ಪಡೆದು ರೈತರಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಅಲ್ಲದೇ 1900 ಕೋಟಿ ರೂ ವಿಮೆ ಹಣ ಇತ್ಯರ್ಥಪಡಿಸಲಾಗಿದ್ದು ಇದಲ್ಲದೆ ರೈತರಿಗೆ ತಾತ್ಕಲಿಕ ಪರಿಹಾರ ಸೇರಿದಂತೆ ಒಟ್ಟಾರೆ 6500 ಕೋಟಿ ರೂಗಳನ್ನು ಒದಗಿಸುವ ಮೂಲಕ ಬರದ ತೀವ್ರತೆ ಬಾದಿಸದಂತೆ ಕ್ರಮ ವಹಿಸಲಾಯಿತು ಎಂದು ಕೃಷಿ ಸಚಿವರು ತಿಳಿಸಿದರು.
ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು 82 ಲಕ್ಷ ಹೆಕ್ಟರ್ ಬಿತ್ತನೆಯಾಗಿದೆ. 40 ಲಕ್ಷ ಹೆಕ್ಟೇರ್ ಕಟಾವು ಮಾಡಲಾಗಿದೆ. ಕಳೆದ 10 ದಿನಗಳಿಂದ ಸುರಿದ ತೀವ್ರ ಮಳೆಯಿಂದ ಸುಮಾರು 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು ವರದಿ ತರಿಸಿಕೊಳ್ಳಲಾಗುತ್ತಿದೆ. ನಿಯಮಾನುಸಾರ ಪರಿಹಾರ ದೊರಯಲಿದೆ ಎಂದು ಅವರು ಮಾಹಿತಿ ನೀಡಿದರು..
ರಾಜ್ಯ ಕೃಷಿ ಇಲಾಖೆ ಕೇಂದ್ರದಿAದ ಅತಿ ಹೆಚ್ಚು ಅನುದಾನವನ್ನು ಪಡೆದು ಅದನ್ನು ರೈತರಿಗೆ ವರ್ಗಾವಣೆ ಮಾಡಿದೆ. 650 ಅಧಿಕಾರಿ ಸಿಬ್ಬಂದಿಗೆ ಬಡ್ತಿ ನೀಡಲಾಗಿದ್ದು ಹೊಸದಾಗಿ 950 ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮ ವಹಿಸಲಾಗಿದ್ದು, ಆಡಳಿತಾತ್ಮಕ ಸುಧಾರಣೆಗೂ ಒತ್ತು ನೀಡಲಾಗಿದೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.
ಕೃಷಿಕರು ತಮ್ಮ ಸಂಪ್ರದಾಯಿಕ ಕೃಷಿಯ ಜೊತೆಗೆ ಸಮಗ್ರ ಕೃಷಿ ಬಗ್ಗೆ ಗಮನ ಹರಿಸಬೇಕು. ಸರ್ಕಾರದ ಯೋಜನೆಗಳ ಲಾಭವನ್ನು ಪಡೆದು ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಯ ಅನುಕೂಲಗಳನ್ನು ಅನುಸರಿಸಿ ಪ್ರಗತಿಪರ ರೈತರಾಗಿ ಪರಿವರ್ತನೆಯಾಗಬೇಕು. ಬೀಜ ನಿಗಮ ವತಿಯಿಂದಲೂ ರೈತರಿಗೆ ಹರಿವು ಮತ್ತು ಪ್ರೋತ್ಸಾಹಗಳನ್ನು ನೀಡಲಾಗುತ್ತಿದೆ ಇವೆಲ್ಲವನ್ನು ಸದ್ಬಳಕೆ ಮಾಡಿಕೊಂಡು ಅನುಕೂಲ ಪಡೆಯಬೇಕು ಎಂದು ಕರೆ ನೀಡಿದರು.
ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ್, ರಾಷ್ಟ್ರೀಯ ಬೀಜ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರಾದ ಅಹಮದ್ ರಾಜಾ, ಬೀಜ ನಿಗಮದ ವ್ಯಸ್ಥಾಪಕ ನಿರ್ದೇಶಕರಾದ ದೇವರಾಜ್, ಮತ್ತಿರರರು ಹಾಜರಿದ್ದರು.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…