ಮಂಡ್ಯ

ಸೆ.25 ರಿಂದ 4 ದಿನಗಳ ಶ್ರೀರಂಗಪಟ್ಟಣ ದಸರಾ

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆ ಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ್ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಶ್ರೀರಂಗಪಟ್ಟಣ ದಸರಾ ಮೆರವಣಿಕೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನಲೆ ಹೊಂದಿರಲಿ ಎಂದರು.

ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಿ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಹಾಲು ಕರೆಯುವ ಸ್ಪರ್ಧೆಯ ಜೊತೆಗೆ ಈ ಬಾರಿ ರಾಸುಗಳ ಪ್ರದರ್ಶನ ಏರ್ಪಡಿಸಿ ಬಹುಮಾನ ವಿತರಣೆ ಮಾಡಬೇಕು ಎಂದರು.

ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಗಳ ಆಯೋಜನೆಗಾಗಿ ಸ್ವಾಗತ, ಕ್ರೀಡಾ, ವೇದಿಕೆ, ಮೆರವಣಿಗೆ, ಆರೋಗ್ಯ, ನಗರ ಅಲಂಕಾರ, ಹಣಕಾಸು, ಸ್ವಚ್ಛತೆ, ಆಹಾರ, ಆಹಾರ ಮೇಳ, ವಸ್ತು ಪ್ರಸರ್ಶನ, ಸಾಂಸ್ಕೃತಿಕ ಕಾರ್ಯಕ್ರನ ಸೇರಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

ವಸ್ತು ಪ್ರದರ್ಶನ ಸಮಿತಿಯಿಂದ ಅನಾವರಣ ಗೊಳಿಸಲಾಗುವ ಮಳಿಗೆಗಳಲ್ಲಿ ಅರ್ಧದಷ್ಟು ಮಳಿಗೆಗಳನ್ನು ಆಹಾರ ಮೇಳಕ್ಕೆ ನೀಡಲಾಗುವುದು. ಇಲ್ಲಿ ವಿವಿಧ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದರು‌.

ಸಭೆಯಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

1 min ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

18 mins ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

33 mins ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

48 mins ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

56 mins ago

17ಬಾರಿ ಬಜೆಟ್‌ ಮಂಡಿಸಿ ಮೈಸೂರಿಗೆ ಏನು ಮಾಡಿದ್ದೀರಿ? ; ಸಿಎಂಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…

1 hour ago