ಮಂಡ್ಯ

ಸೆ.25 ರಿಂದ 4 ದಿನಗಳ ಶ್ರೀರಂಗಪಟ್ಟಣ ದಸರಾ

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆ ಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ್ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಶ್ರೀರಂಗಪಟ್ಟಣ ದಸರಾ ಮೆರವಣಿಕೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನಲೆ ಹೊಂದಿರಲಿ ಎಂದರು.

ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಿ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಹಾಲು ಕರೆಯುವ ಸ್ಪರ್ಧೆಯ ಜೊತೆಗೆ ಈ ಬಾರಿ ರಾಸುಗಳ ಪ್ರದರ್ಶನ ಏರ್ಪಡಿಸಿ ಬಹುಮಾನ ವಿತರಣೆ ಮಾಡಬೇಕು ಎಂದರು.

ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಗಳ ಆಯೋಜನೆಗಾಗಿ ಸ್ವಾಗತ, ಕ್ರೀಡಾ, ವೇದಿಕೆ, ಮೆರವಣಿಗೆ, ಆರೋಗ್ಯ, ನಗರ ಅಲಂಕಾರ, ಹಣಕಾಸು, ಸ್ವಚ್ಛತೆ, ಆಹಾರ, ಆಹಾರ ಮೇಳ, ವಸ್ತು ಪ್ರಸರ್ಶನ, ಸಾಂಸ್ಕೃತಿಕ ಕಾರ್ಯಕ್ರನ ಸೇರಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

ವಸ್ತು ಪ್ರದರ್ಶನ ಸಮಿತಿಯಿಂದ ಅನಾವರಣ ಗೊಳಿಸಲಾಗುವ ಮಳಿಗೆಗಳಲ್ಲಿ ಅರ್ಧದಷ್ಟು ಮಳಿಗೆಗಳನ್ನು ಆಹಾರ ಮೇಳಕ್ಕೆ ನೀಡಲಾಗುವುದು. ಇಲ್ಲಿ ವಿವಿಧ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದರು‌.

ಸಭೆಯಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

11 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

15 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

20 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

25 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

33 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago