ಮಂಡ್ಯ

ಸಾಕ್ಷರತಾ ಪರೀಕ್ಷೆ ಬರೆದ 40 ಖೈದಿಗಳು

ಮಂಡ್ಯ : ‘ಕಲಿಕೆಯಿಂದ ಬದಲಾವಣೆಯ ಸಾಕ್ಷರತಾ ಕಾರ್ಯಕ್ರಮದಡಿ ಅಕ್ಷರಾಭ್ಯಾಸ ಮಾಡಿದ್ದ ಮಂಡ್ಯ ಜಿಲ್ಲಾ ಕಾರಾಗೃಹದ ಒಟ್ಟು 40 ಖೈದಿಗಳು ಭಾನುವಾರ ಕಾರಾಗೃಹ ಕೇಂದ್ರದಲ್ಲಿ ಬರೆದ ಸಾಕ್ಷರತಾ ಪರೀಕ್ಷೆಯನ್ನು ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಅವರು ವೀಕ್ಷಿಸಿದರು.

ನಾನಾ ಕಾರಣಗಳಿಗಾಗಿ ಕಾರಾಗೃಹ ಸೇರಿರುವ ಅನಕ್ಷರಸ್ಥ ಕೈದಿಗಳು, ಕಾರಾಗೃಹದಲ್ಲೇ ಕಳೆದ ಒಂದು ವರ್ಷದಿಂದ ಅಕ್ಷರಾಭ್ಯಾಸ ಮಾಡಿದ್ದರು. ಒಟ್ಟು 40 ಮಂದಿ ಖೈದಿಗಳ ಪೈಕಿ ಒಟ್ಟು 37 ಪುರುಷರು ಹಾಗೂ ೩ ಮಹಿಳೆಯರು ಪರೀಕ್ಷೆ ಬರೆದರು.

ಸಿಇಒ ಕೆ.ಆರ್. ನಂದಿನಿ ಅವರು ಮಾತನಾಡಿ, ಖೈದಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಅಲ್ಲದೆ, ಕೌಶಲ್ಯಾಭಿವೃದ್ಧಿ ಚಟುವಟಿಕೆಗಳ ಕುರಿತು ತರಬೇತಿ ನೀಡಿ ಅವರಲ್ಲಿ ಕೌಶಲ್ಯವನ್ನು ಹೆಚ್ಚಿಸುವುದರ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಕಾರಾಗೃಹದಲ್ಲಿ ಮಹಿಳೆಯರಿಗೆ ಒದಗಿಸಿರುವ ಸೌಲಭ್ಯಗಳು ಹಾಗೂ ಬ್ಯಾರಕ್‌ಗಳು, ಕಾರ್ಖಾನೆ ವಿಭಾಗ, ಗ್ರಂಥಾಲಯ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಅವರು ವೀಕ್ಷಿಸುತ್ತಿರುವುದು..

ಮೊಮ್ಮಕ್ಕಳು ಕಲಿಯೋ ಒತ್ನಲ್ಲಿ ನಾ ಓದ್ ಕಲ್ತೆ: ಕಲಿಕೆ ಆರಂಭಿಸಿದಾಗ ನನ್ನ ಮಕ್ಕಳು, ಮೊಮ್ಮಕ್ಕಳು ಕಲಿಯುವ ವಯಸ್ಸಿನಲ್ಲಿ ನಾನು ಪೆನ್ನು, ಪುಸ್ತಕ ಹಿಡಿಯಬೇಕಾ, ಈ ವಯಸ್ಸಿನಲ್ಲಿ ನನಗೆ ಓದು ಒಲಿಯುತ್ತಾ, ಕಲಿತು ಏನ್ಮಾಡಬೇಕಿತ್ತು ಎನ್ನುವ ಮನೋಭಾವ ಇತ್ತು. ಆದರೆ, ಶಿವಲಿಂಗಯ್ಯ ಮೇಷ್ಟ್ರು ಓದು ಏಕೆ ಬೇಕು ಎನ್ನುವುದನ್ನು ಅರ್ಥ ಮಾಡಿಸಿದ್ರು. ನಂತರ ಕಲಿಕೆ ಆರಂಭವಾಯ್ತು. ನಾನೀಗ ನಾಲ್ಕು ಅಕ್ಷರ ಕಲ್ತೀವ್ನಿ. ಓದ್ತೀದಿನಿ ಎಂದು ಸಿಇಓ ಅವರಿಗೆ ಹೇಳುವಾಗ ಕೈದಿಯೊಬ್ಬರ ಮುಖದಲ್ಲಿ ಮಂದಹಾಸ, ಸಾರ್ಥಕ ಭಾವನೆ ಮೂಡಿತ್ತು.

ನಮ್ಗೆ ಅಕ್ಷರ ಹೇಳ್ಕೊಟ್ಟಿರೋ ಶಿವಲಿಂಗಯ್ಯ ಮೇಷ್ಟ್ರುಗೆ ನಾವೆಲ್ಲಾ ಸೇರಿ ಶಿಕ್ಷಕರ ದಿನಾಚರಣೆ ಆದ ಸೆ. ೫ ರಂದು ಸನ್ಮಾನಿಸಿ ಗೌರವಿಸುವಂತೆ ಶಿಕ್ಷಣ ಇಲಾಖೆಯ ಅಽಕಾರಿಗಳಿಗೆ ಕೋರಲಾಗುವುದು ಎಂದು ಕೃತಜ್ಞತಾ ಭಾವದಿಂದ ಅಲ್ಲಿದ್ದ ಖೈದಿಗಳು ಹೇಳಿದರು.

ಶಿಕ್ಷಕ ಶಿವಲಿಂಗಯ್ಯನವರ ಶ್ರಮ ಸಾರ್ಥಕ: ಜಿಲ್ಲಾ ಕಾರಾಗೃಹದಲ್ಲಿ ಶಿಕ್ಷಕ ಶಿವಲಿಂಗಯ್ಯ ಅವರ ಅವಿರತ ಪ್ರಯತ್ನದ ಫಲವಾಗಿ ಈವರೆವಿಗೂ ಸುಮಾರು ೧೨೬ ಜನ ಖೈದಿಗಳು ಅಕ್ಷರ ಕಲಿತಿದ್ದಾರೆ. ಇಲ್ಲಿ ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ಹಲವು ಸಹೋದ್ಯೋಗಿಗಳು ಖೈದಿಗಳಿಗೆ ಪಾಠ ಕಲಿಸಲು ಹೋಗುತ್ತಿದ್ದಾರೆ ಎಂದು ಹೀಯಾಳಿಸಿದ್ದರು. ಆದರೆ, ಇದೆಲ್ಲವನ್ನೂ ಸಕರಾತ್ಮಕವಾಗಿ ತೆಗೆದುಕೊಂಡು ಪಾಠ ಕಲಿಸಿದ ಶಿವಲಿಂಗಯ್ಯ ಅವರಿಗೂ ಸಾರ್ಥಕ ಭಾವನೆ.

ಬಾಳಿಗೆ ಬೆಳಕು ಪಠ್ಯ: ಜಿಲ್ಲಾ ಕಾರಾಗೃಹದ ಅಧೀಕ್ಷಕ ಟಿ.ಕೆ.ಲೋಕೇಶ್ ಮಾತನಾಡಿ, ನಿತ್ಯ ೨ ಗಂಟೆ ವಿದ್ಯಾಭ್ಯಾಸ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ವ್ಯಾಸಂಗಕ್ಕೆ ಅನುಕೂಲ ಆಗುವಂತೆ ಕಲಿಕಾ ಸಾಮಗ್ರಿ ವಿತರಿಸಲಾಗಿದೆ. ‘ಬಾಳಿಗೆ ಬೆಳಕು’ ಪುಸ್ತಕದಲ್ಲಿ ಪಠ್ಯವನ್ನು ಬೋಧಿಸಲಾಗಿದೆ. ಬರವಣಿಗೆ, ಓದು ಮತ್ತು ಸಾಮಾನ್ಯ ಲೆಕ್ಕಾಚಾರ ಹಾಗೂ ಸಾಮಾನ್ಯ ಜ್ಞಾನ ಕಲಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ, ಅಣಬೆ ಬೇಸಾಯ, ಆಹಾರ ಸಿದ್ಧಪಡಿಸುವಿಕೆ, ಪ್ಲಂಬಿಂಗ್, ಮೋಟಾರು ರಿಪೇರಿ ಸೇರಿದಂತೆ ಖೈದಿಗಳ ಆಸಕ್ತಿ ಆಧರಿಸಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಹೇಳಿದರು.

ನಮ್ಮ ಗ್ರಂಥಾಲಯದಲ್ಲಿ ೧೮ ಸಾವಿರ ಪುಸ್ತಕಗಳಿವೆ. ಪ್ರತಿ ದಿನ ೧೩ ದಿನಪತ್ರಿಕೆಗಳು, ೫ ವಾರ ಪತ್ರಿಕೆಗಳು ಹಾಗೂ ಮಾಸ ಪತ್ರಿಕೆಗಳನ್ನು ಖೈದಿಗಳ ಅನುಕೂಲಕ್ಕಾಗಿ ತರಿಸಲಾಗುತ್ತಿದೆ. ಗ್ರಂಥಾಲಯದಲ್ಲಿ ಟೇಬಲ್, ಕುರ್ಚಿ, ಫ್ಯಾನ್ ಸೇರಿದಂತೆ ಇತರೆ ಸವಲತ್ತುಗಳನ್ನು ಕಲ್ಪಿಸಲಾಗಿದೆ ಎಂದರು.

ಉತ್ತರ ಪತ್ರಿಕೆಗಳ ಮೌಲ್ಯಮಾಪನ: ಈ ದಿನ ನಡೆದ ಸಾಕ್ಷರತಾ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮಂಡ್ಯ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಮಾಡಿಸಲಾಗುವುದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ‘ನವ ಸಾಕ್ಷರ ಪ್ರಮಾಣಪತ್ರವನ್ನು ನೀಡಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

3 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

3 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

3 hours ago