ಮಂಡ್ಯ

ಸಾಕ್ಷರತಾ ಪರೀಕ್ಷೆ ಬರೆದ 40 ಖೈದಿಗಳು

ಮಂಡ್ಯ : ‘ಕಲಿಕೆಯಿಂದ ಬದಲಾವಣೆಯ ಸಾಕ್ಷರತಾ ಕಾರ್ಯಕ್ರಮದಡಿ ಅಕ್ಷರಾಭ್ಯಾಸ ಮಾಡಿದ್ದ ಮಂಡ್ಯ ಜಿಲ್ಲಾ ಕಾರಾಗೃಹದ ಒಟ್ಟು 40 ಖೈದಿಗಳು ಭಾನುವಾರ ಕಾರಾಗೃಹ ಕೇಂದ್ರದಲ್ಲಿ ಬರೆದ ಸಾಕ್ಷರತಾ ಪರೀಕ್ಷೆಯನ್ನು ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಅವರು ವೀಕ್ಷಿಸಿದರು.

ನಾನಾ ಕಾರಣಗಳಿಗಾಗಿ ಕಾರಾಗೃಹ ಸೇರಿರುವ ಅನಕ್ಷರಸ್ಥ ಕೈದಿಗಳು, ಕಾರಾಗೃಹದಲ್ಲೇ ಕಳೆದ ಒಂದು ವರ್ಷದಿಂದ ಅಕ್ಷರಾಭ್ಯಾಸ ಮಾಡಿದ್ದರು. ಒಟ್ಟು 40 ಮಂದಿ ಖೈದಿಗಳ ಪೈಕಿ ಒಟ್ಟು 37 ಪುರುಷರು ಹಾಗೂ ೩ ಮಹಿಳೆಯರು ಪರೀಕ್ಷೆ ಬರೆದರು.

ಸಿಇಒ ಕೆ.ಆರ್. ನಂದಿನಿ ಅವರು ಮಾತನಾಡಿ, ಖೈದಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಅಲ್ಲದೆ, ಕೌಶಲ್ಯಾಭಿವೃದ್ಧಿ ಚಟುವಟಿಕೆಗಳ ಕುರಿತು ತರಬೇತಿ ನೀಡಿ ಅವರಲ್ಲಿ ಕೌಶಲ್ಯವನ್ನು ಹೆಚ್ಚಿಸುವುದರ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಕಾರಾಗೃಹದಲ್ಲಿ ಮಹಿಳೆಯರಿಗೆ ಒದಗಿಸಿರುವ ಸೌಲಭ್ಯಗಳು ಹಾಗೂ ಬ್ಯಾರಕ್‌ಗಳು, ಕಾರ್ಖಾನೆ ವಿಭಾಗ, ಗ್ರಂಥಾಲಯ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಅವರು ವೀಕ್ಷಿಸುತ್ತಿರುವುದು..

ಮೊಮ್ಮಕ್ಕಳು ಕಲಿಯೋ ಒತ್ನಲ್ಲಿ ನಾ ಓದ್ ಕಲ್ತೆ: ಕಲಿಕೆ ಆರಂಭಿಸಿದಾಗ ನನ್ನ ಮಕ್ಕಳು, ಮೊಮ್ಮಕ್ಕಳು ಕಲಿಯುವ ವಯಸ್ಸಿನಲ್ಲಿ ನಾನು ಪೆನ್ನು, ಪುಸ್ತಕ ಹಿಡಿಯಬೇಕಾ, ಈ ವಯಸ್ಸಿನಲ್ಲಿ ನನಗೆ ಓದು ಒಲಿಯುತ್ತಾ, ಕಲಿತು ಏನ್ಮಾಡಬೇಕಿತ್ತು ಎನ್ನುವ ಮನೋಭಾವ ಇತ್ತು. ಆದರೆ, ಶಿವಲಿಂಗಯ್ಯ ಮೇಷ್ಟ್ರು ಓದು ಏಕೆ ಬೇಕು ಎನ್ನುವುದನ್ನು ಅರ್ಥ ಮಾಡಿಸಿದ್ರು. ನಂತರ ಕಲಿಕೆ ಆರಂಭವಾಯ್ತು. ನಾನೀಗ ನಾಲ್ಕು ಅಕ್ಷರ ಕಲ್ತೀವ್ನಿ. ಓದ್ತೀದಿನಿ ಎಂದು ಸಿಇಓ ಅವರಿಗೆ ಹೇಳುವಾಗ ಕೈದಿಯೊಬ್ಬರ ಮುಖದಲ್ಲಿ ಮಂದಹಾಸ, ಸಾರ್ಥಕ ಭಾವನೆ ಮೂಡಿತ್ತು.

ನಮ್ಗೆ ಅಕ್ಷರ ಹೇಳ್ಕೊಟ್ಟಿರೋ ಶಿವಲಿಂಗಯ್ಯ ಮೇಷ್ಟ್ರುಗೆ ನಾವೆಲ್ಲಾ ಸೇರಿ ಶಿಕ್ಷಕರ ದಿನಾಚರಣೆ ಆದ ಸೆ. ೫ ರಂದು ಸನ್ಮಾನಿಸಿ ಗೌರವಿಸುವಂತೆ ಶಿಕ್ಷಣ ಇಲಾಖೆಯ ಅಽಕಾರಿಗಳಿಗೆ ಕೋರಲಾಗುವುದು ಎಂದು ಕೃತಜ್ಞತಾ ಭಾವದಿಂದ ಅಲ್ಲಿದ್ದ ಖೈದಿಗಳು ಹೇಳಿದರು.

ಶಿಕ್ಷಕ ಶಿವಲಿಂಗಯ್ಯನವರ ಶ್ರಮ ಸಾರ್ಥಕ: ಜಿಲ್ಲಾ ಕಾರಾಗೃಹದಲ್ಲಿ ಶಿಕ್ಷಕ ಶಿವಲಿಂಗಯ್ಯ ಅವರ ಅವಿರತ ಪ್ರಯತ್ನದ ಫಲವಾಗಿ ಈವರೆವಿಗೂ ಸುಮಾರು ೧೨೬ ಜನ ಖೈದಿಗಳು ಅಕ್ಷರ ಕಲಿತಿದ್ದಾರೆ. ಇಲ್ಲಿ ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ಹಲವು ಸಹೋದ್ಯೋಗಿಗಳು ಖೈದಿಗಳಿಗೆ ಪಾಠ ಕಲಿಸಲು ಹೋಗುತ್ತಿದ್ದಾರೆ ಎಂದು ಹೀಯಾಳಿಸಿದ್ದರು. ಆದರೆ, ಇದೆಲ್ಲವನ್ನೂ ಸಕರಾತ್ಮಕವಾಗಿ ತೆಗೆದುಕೊಂಡು ಪಾಠ ಕಲಿಸಿದ ಶಿವಲಿಂಗಯ್ಯ ಅವರಿಗೂ ಸಾರ್ಥಕ ಭಾವನೆ.

ಬಾಳಿಗೆ ಬೆಳಕು ಪಠ್ಯ: ಜಿಲ್ಲಾ ಕಾರಾಗೃಹದ ಅಧೀಕ್ಷಕ ಟಿ.ಕೆ.ಲೋಕೇಶ್ ಮಾತನಾಡಿ, ನಿತ್ಯ ೨ ಗಂಟೆ ವಿದ್ಯಾಭ್ಯಾಸ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ವ್ಯಾಸಂಗಕ್ಕೆ ಅನುಕೂಲ ಆಗುವಂತೆ ಕಲಿಕಾ ಸಾಮಗ್ರಿ ವಿತರಿಸಲಾಗಿದೆ. ‘ಬಾಳಿಗೆ ಬೆಳಕು’ ಪುಸ್ತಕದಲ್ಲಿ ಪಠ್ಯವನ್ನು ಬೋಧಿಸಲಾಗಿದೆ. ಬರವಣಿಗೆ, ಓದು ಮತ್ತು ಸಾಮಾನ್ಯ ಲೆಕ್ಕಾಚಾರ ಹಾಗೂ ಸಾಮಾನ್ಯ ಜ್ಞಾನ ಕಲಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ, ಅಣಬೆ ಬೇಸಾಯ, ಆಹಾರ ಸಿದ್ಧಪಡಿಸುವಿಕೆ, ಪ್ಲಂಬಿಂಗ್, ಮೋಟಾರು ರಿಪೇರಿ ಸೇರಿದಂತೆ ಖೈದಿಗಳ ಆಸಕ್ತಿ ಆಧರಿಸಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಹೇಳಿದರು.

ನಮ್ಮ ಗ್ರಂಥಾಲಯದಲ್ಲಿ ೧೮ ಸಾವಿರ ಪುಸ್ತಕಗಳಿವೆ. ಪ್ರತಿ ದಿನ ೧೩ ದಿನಪತ್ರಿಕೆಗಳು, ೫ ವಾರ ಪತ್ರಿಕೆಗಳು ಹಾಗೂ ಮಾಸ ಪತ್ರಿಕೆಗಳನ್ನು ಖೈದಿಗಳ ಅನುಕೂಲಕ್ಕಾಗಿ ತರಿಸಲಾಗುತ್ತಿದೆ. ಗ್ರಂಥಾಲಯದಲ್ಲಿ ಟೇಬಲ್, ಕುರ್ಚಿ, ಫ್ಯಾನ್ ಸೇರಿದಂತೆ ಇತರೆ ಸವಲತ್ತುಗಳನ್ನು ಕಲ್ಪಿಸಲಾಗಿದೆ ಎಂದರು.

ಉತ್ತರ ಪತ್ರಿಕೆಗಳ ಮೌಲ್ಯಮಾಪನ: ಈ ದಿನ ನಡೆದ ಸಾಕ್ಷರತಾ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮಂಡ್ಯ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಮಾಡಿಸಲಾಗುವುದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ‘ನವ ಸಾಕ್ಷರ ಪ್ರಮಾಣಪತ್ರವನ್ನು ನೀಡಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago